ರಾಷ್ಟ್ರ ರಾಜಧಾನಿಯಲ್ಲಿ ಚಳಿಯೋ ಚಳಿ... ದಟ್ಟ ಮಂಜಿಗೆ ಕಾಣದ ರಸ್ತೆ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿಯ ಅಬ್ಬರ ಜೋರಾಗಿದ್ದು, ಇಂದು ನಸುಕಿನ ಜಾವ ದಟ್ಟವಾದ ಮಂಜು ಆವರಿಸಿದೆ. ಇದೇ ಕಾರಣಕ್ಕಾಗಿ ಕೆಲವೊಂದು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ. ದೆಹಲಿಯ ಲೂಧಿ ರೋಡ್ನಲ್ಲಿ ದಟ್ಟವಾದ ಮಂಜು ಆವರಿಸಿದ್ದ ಕಾರಣ ರಸ್ತೆಗಳು ಕಾಣದೇ ವಾಹನ ಸವಾರರು ಪರದಾಟ ನಡೆಸಬೇಕಾಯ್ತು.