ಮಮತಾ ಬ್ಯಾನರ್ಜಿ ಸರ್ವಾಧಿಕಾರಿ ಆಡಳಿತ ಈ ಸಲ ಕೊನೆ: ತೇಜಸ್ವಿ ಸೂರ್ಯ ವಾಗ್ದಾಳಿ - ಬಿಜೆಪಿ ಮುಖಂಡ ತೇಜಸ್ವಿ
🎬 Watch Now: Feature Video

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನಿರಂಕುಶಾಧಿಕಾರ, ಸರ್ವಾಧಿಕಾರ ಮತ್ತು ಫ್ಯಾಸಿಸ್ಟ್ ಸರ್ಕಾರ ಈ ಚುನಾವಣೆಯಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಫ್ಯಾಸಿಸಂ ವಿರುದ್ಧ ಧ್ವನಿ ಎತ್ತುವಂತೆ, ಕಾನೂನು ರಕ್ಷಣೆ ಮಾಡುವಂತೆ ಹಾಗೂ ಭಾರತೀಯ ಸಂವಿಧಾನ ಗೌರವಿಸುವಂತೆ ನಾನು ಇಲ್ಲಿನ ಜನರಲ್ಲಿ ಕೇಳುಕೊಳ್ಳುತ್ತೇನೆ ಎಂದಿದ್ದಾರೆ.