ಬಾವಿಯಲ್ಲಿ ಬಿದ್ದ ಚಿರತೆ... ಮೂಕ ಜೀವಿಯ ಪ್ರಾಣ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿ! - ಅರಣ್ಯ ಸಿಬ್ಬಂದಿಯಿಂದ ರಕ್ಷಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7559715-thumbnail-3x2-wdfdfdf.jpg)
ಗಾಂಧಿನಗರ(ಗುಜರಾತ್): ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಗಾಂಧಿನಗರ ಜಿಲ್ಲೆಯ ರುಣ್ವಾಡ್ ಗ್ರಾಮದಲ್ಲಿನ ಬಾವಿಯಲ್ಲಿ ಚಿರತೆ ಬಿದ್ದಿತ್ತು. ಅದನ್ನ ನೋಡಿರುವ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅವರು ಚಿರತೆಯನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲಕ್ಕೆ ಎತ್ತಿದ್ದಾರೆ. ಬಳಿಕ ಅದನ್ನು ಕಾಡಿನೊಳಗೆ ಬಿಡಲಾಗಿದೆ.