thumbnail

ಕೇರಳದ ಆನೆ ‘ಗುರುವಾಯೂರು ಪದ್ಮನಾಭನ್’ ಸಾವು

By

Published : Feb 27, 2020, 6:25 AM IST

Updated : Feb 27, 2020, 6:34 AM IST

ತ್ರಿಶೂರ್ (ಕೇರಳ): ಗುರುವಾಯೂರು ದೇವಸ್ಥಾನದ ಆನೆ ‘ಗುರುವಾಯೂರು ಪದ್ಮನಾಭನ್’ (84) ಬುಧವಾರ ಮಧ್ಯಾಹ್ನ ನಿಧನ ಹೊಂದಿದೆ ಎಂದು ದೇವಸ್ಥಾನದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲ ವಾರಗಳಿಂದ ಅನಾರೋಗ್ಯಕ್ಕೀಡಾಗಿದ್ದ ಆನೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ‘ಪದ್ಮನಾಭನ್’ ತ್ರಿಶೂರ್ ಪೂರ್ಣಂ ಸೇರಿದಂತೆ ಅನೇಕ ದೇಗುಲಗಳ ಉತ್ಸವದಲ್ಲಿ ಪಾಲ್ಗೊಂಡಿತ್ತು. 2004ರಲ್ಲಿ ಪಾಲಕ್ಕಾಡ್‌ ಜಿಲ್ಲೆಯಲ್ಲಿ ನಡೆದ ನೆನ್ಮರ ವೆಲ್ಲಂಗಿ ವೇಳಾ ಹಬ್ಬದಲ್ಲಿ ಪಾಲ್ಗೊಂಡು ₹2.22 ಲಕ್ಷ ಸಂಭಾವನೆ ಪಡೆದುಕೊಂಡಿತ್ತು. ‘ಪದ್ಮನಾಭನ್’ ನಿಧನದಿಂದ ದೇವಸ್ಥಾನದಲ್ಲಿರುವ ಆನೆಗಳ ಸಂಖ್ಯೆ 47ಕ್ಕೆ ಇಳಿದಿದೆ.
Last Updated : Feb 27, 2020, 6:34 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.