ಪ್ರತಿಭಟನೆ ಕೊನೆಗೊಳಿಸುವಂತೆ ರೈತರಲ್ಲಿ ಹೇಮಾ ಮಾಲಿನಿ ಮನವಿ - ಹೇಮಾ ಮಾಲಿನಿ ಮನವಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10042456-thumbnail-3x2-megha.jpg)
ಮಥುರಾ (ಉತ್ತರ ಪ್ರದೇಶ): ಹೇಗೆ ಯೋಧರು ಗಡಿಯಲ್ಲಿ ನಮ್ಮ ದೇಶದ ರಕ್ಷಣೆ ಮಾಡುತ್ತಾರೋ, ಹೇಗೆ ನಮ್ಮ ರೈತರು ನಮಗೆ ಅನ್ನ ನೀಡುತ್ತಾರೋ ಹಾಗೆಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರ ಕಳೆದ ಆರು ವರ್ಷಗಳಿಂದ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕೃಷಿ ಕಾನೂನುಗಳ ಮೂಲಕ ರೈತರಿಗೆ ಹೆಚ್ಚಿನ ಹಕ್ಕನ್ನು ಸರ್ಕಾರ ನೀಡಿದೆ. ಮೋದಿ ಜೀ ಅವರ ಮೇಲೆ ಸಂಪೂರ್ಣ ವಿಶ್ವಾಸವಿಡಿ. ಸರ್ಕಾರದೊಂದಿಗೆ ಮಾತುಕತೆ ನಡೆಸಿ ನೂತನ ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಕೊನೆಗೊಳಿಸಬೇಕು ಎಂದು ಬಿಜೆಪಿ ನಾಯಕಿ ಹೇಮಾ ಮಾಲಿನಿ ರೈತರಲ್ಲಿ ಮನವಿ ಮಾಡಿದ್ದಾರೆ.