thumbnail

ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಲಾರಿ... ಕಾರ್ತಿಕ ಸೋಮವಾರದಂದೇ ಮಗು ಸೇರಿ ದಂಪತಿ ಸಾವು!

By

Published : Nov 12, 2019, 4:10 PM IST

ಅವರೆಲ್ಲ ದಿನಗೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಾರ್ತಿಕ ಸೋಮವಾರದಂದು ಶಿವನ ದೇವಸ್ಥಾನಕ್ಕೆ ತೆರಳಿದವರು ಜೀವಂತವಾಗಿ ವಾಪಾಸ್​ ಬರಲೇ ಇಲ್ಲ. ಹೌದು, ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಗು ಸೇರಿ ದಂಪತಿ ಸಾವನ್ನಪ್ಪಿದ್ದಾರೆ. ಇಲ್ಲಿನ ತಿಮ್ಮಾಪುರಂ ಮಿಲ್​ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರು ಕಾರ್ತಿಕ ಸೋಮವಾರದ ಹಿನ್ನೆಲೆ ಚಿಲಕಲೂರಿಪೇಟದಲ್ಲಿರುವ ಶಿವಾಲಯಕ್ಕೆ ತೆರಳಲು ಬಸ್​ಗಾಗಿ ರಸ್ತೆಪಕ್ಕದಲ್ಲಿ ನಿಂತಿದ್ದರು. ಈ ವೇಳೆ, ಕಬ್ಬಿಣ ತುಂಬಿದ ಲಾರಿಯೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಇವರ ಮೇಲೆ ಹರಿದಿದೆ. ಪರಿಣಾಮ ಮಗುವೊಂದು ಸ್ಥಳದಲ್ಲೇ ಮೃತಪಟ್ಟಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಂಪತಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.