ನಡುರೋಡ್​​ನಲ್ಲೇ ಯುವಕನನ್ನ ಕೊಡಲಿಯಿಂದ ಹೊಡೆದು ಕೊಲೆಗೈದ ವ್ಯಕ್ತಿ!

By

Published : Oct 20, 2020, 7:40 PM IST

thumbnail
ಪುಣೆ: ಹಣದ ವಿಚಾರವಾಗಿ ಇಬ್ಬರು ವ್ಯಕ್ತಿಗಳ ನಡುವೆ ನಡೆದ ವಾಗ್ವಾದವನ್ನ ಗಮನದಲ್ಲಿಟ್ಟುಕೊಂಡು ವ್ಯಕ್ತಿಯೋರ್ವ ಯುವಕನನ್ನ ಕೊಲೆಗೈದಿದ್ದಾನೆ. ಪುಣೆಯ ಭಾರ್​ಚೌಕ್​ನಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಕ್ಷಿತಿಜ್ ಲಕ್ಷ್ಮೀಕಾಂತ್ ವೈರಾಗರ್​ ಮೃತ ವ್ಯಕ್ತಿ. ಕಳೆದ ಮೂರು ತಿಂಗಳ ಹಿಂದೆ ಕ್ಷಿತಿಜ್​ ಹಾಗೂ ಅನಿಕೆತ್​​ ನಡುವೆ ಹಣದ ವಿಚಾರವಾಗಿ ವಾಗ್ವಾದ ನಡೆದಿತ್ತು. ಬರೋಬ್ಬರಿ ಮೂರು ತಿಂಗಳ ಬಳಿಕ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಇದರ ಸಂಪೂರ್ಣ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಆರೋಪಿಯನ್ನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.