ನೀರು ಹರಿಯುತ್ತಿದ್ದ ರಸ್ತೆಯಲ್ಲಿ ಕುಳ್ಳಿರಿಸಿ ಗುತ್ತಿಗೆದಾರನ ಮೈಮೇಲೆ ಕಸ ಸುರಿಸಿದ ಶಿವಸೇನೆ ಶಾಸಕ! - ಚಂಡಿವಾಲಿ ಕ್ಷೇತ್ರದ ಶಿವಸೇನಾ ಶಾಸಕ
🎬 Watch Now: Feature Video

ಮುಂಬೈ: ಮಳೆ ಬಂದು ರಸ್ತೆಯಲ್ಲಿ ನೀರು ನಿಂತ ಕಾರಣ ಶಿವಸೇನಾ ಪಕ್ಷದ ಶಾಸಕ ಚಂಡಿವಾಲಿ ದಿಲೀಪ್ ಲಾಂಡೆ ರಸ್ತೆ ಕಾಮಗಾರಿ ನಡೆಸಿದ ಗುತ್ತಿಗೆದಾರನನ್ನು ರಸ್ತೆಯಲ್ಲಿ ಕುಳ್ಳಿರಿಸಿ, ಆತನ ಮೇಲೆ ತನ್ನ ಪಕ್ಷದ ಕಾರ್ಯಕರ್ತರಿಂದ ಕಸ ಸುರಿದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ, ಗುತ್ತಿಗೆದಾರ ತನ್ನ ಕೆಲಸವನ್ನು ತಾನು ಸರಿಯಾಗಿ ಮಾಡುತ್ತಿಲ್ಲ. ಹಾಗಾಗಿ, ಈ ರೀತಿ ಶಿಕ್ಷೆ ನೀಡಿದ್ದೇನೆ ಎಂದು ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾನೆ.