thumbnail

By

Published : Nov 30, 2021, 7:50 PM IST

ETV Bharat / Videos

ಮುಂಬೈನ ಪ್ರಖ್ಯಾತ ಸಿದ್ಧಿ ವಿನಾಯಕನಿಗೆ ಪೂಜೆ ಸಲ್ಲಿಸಿದ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಮುಂಬೈ: 2 ದಿನಗಳ ಮುಂಬೈ ಪ್ರವಾಸ ಕೈಗೊಂಡಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಸಂಜೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಬಳಿಕ ಇಲ್ಲಿನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಗಳವಾರ(ಇಂದು) ರಾತ್ರಿ 8 ಗಂಟೆಗೆ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಜೊತೆ ಅವರು ಸಭೆ ನಡೆಸಲಿದ್ದಾರೆ. ಈ ವೇಳೆ ಶಿವಸೇನೆ ಸಂಸದ ಸಂಜಯ್ ರಾವತ್ ಕೂಡ ಇರಲಿದ್ದಾರೆ. ನಾಳೆ (ಡಿ.1ರಂದು) ಎನ್​ಸಿಪಿ​ ವರಿಷ್ಠ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ರಾಜಕೀಯ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.