ಚಿನ್ನದ ಅಂಬಾರಿ ಹೊತ್ತ ಅರ್ಜುನನ ಗಾಂಭೀರ್ಯದ ನಡಿಗೆ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಜನಸಾಗರ! - ಚಿನ್ನದ ಅಂಬಾರಿ ಹೊತ್ತ ಅರ್ಜುನ
🎬 Watch Now: Feature Video
ಮೈಸೂರು: ಮೈಸೂರು ದಸರಾದ ಪ್ರಮುಖ ಭಾಗ ಜಂಬೂ ಸವಾರಿ ಅಂತಿಮ ಹಂತ ತಲುಪಿದೆ. ಅರಮನೆ ಮುಂಭಾಗ ಕುಂಭ ಲಗ್ನದಲ್ಲಿ ಅರ್ಜುನನ ಮೇಲೆ ವಿರಾಜಮಾನಳಾದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ಕೊಟ್ಟರು. ಈ ಐತಿಹಾಸಿಕ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಮೈಸೂರು ಮೇಯರ್ ಪುಷ್ಪಲತಾ ಉಪಸ್ಥಿತರಿದ್ದರು. ಸತತ 8 ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅರ್ಜುನ ಆನೆ ರಾಜ ಗಾಂಭೀರ್ಯದಿಂದ ಸಾಗುತ್ತಿದ್ದಾನೆ. ಅರ್ಜುನನ ಬಲ ಭಾಗದಲ್ಲಿ ಕಾವೇರಿ, ಎಡಭಾಗದಲ್ಲಿ ವಿಜಯ ಎಂಬ ಕುಮ್ಕಿ ಆನೆಗಳು ಸಾಥ್ ನೀಡಿದ್ದು, ಸಯ್ಯಾಜಿರಾವ್ ವೃತ್ತ, ಬಂಬೂ ಬಜಾರ್ ಮಾರ್ಗವಾಗಿ 5 ಕಿ ಮೀ ಸಾಗಿ ಬನ್ನಿ ಮಂಟಪದಲ್ಲಿ ಸಮಾಪನಗೊಳ್ಳಲಿದೆ.