ಬಿಡಿಎ ಕಾರ್ಯಾಚರಣೆ: ಹೆಚ್​ಎಸ್​ಆರ್ ಬಡಾವಣೆಯ 20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Feb 23, 2023, 9:09 AM IST

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ ಹೆಚ್​ಎಸ್​ಆರ್ ಒಂದನೇ ಸೆಕ್ಟರ್​ನಲ್ಲಿ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಅಗರ ಗ್ರಾಮದ ಸರ್ವೇ ನಂ.74, ಹೆಚ್​ಎಸ್​ಆರ್ ಒಂದನೇ ಸೆಕ್ಟರ್​ನಲ್ಲಿ ಬಿಡಿಎಗೆ ಸೇರಿದ್ದ 15 ಗಂಟೆ ಜಾಗದಲ್ಲಿ ತಲೆ ಎತ್ತಿದ್ದ ಅನಧಿಕೃತ ಶೆಡ್​ಗಳನ್ನು ತೆರವುಗೊಳಿಸಲಾಗಿದೆ. ಇತ್ತೀಚೆಗೆ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಅವರು ಸ್ಥಳ ಪರಿಶೀಲನೆ ನಡೆಸಿ ಜಾಗವನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ಈ ಕಾರ್ಯಾಚರಣೆಯನ್ನು ಬಿಡಿಎ ಆಯುಕ್ತ ಕುಮಾರ ನಾಯಕ ಅವರ ಆದೇಶದನ್ವಯ ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ ನಂಜುಂಡೇಗೌಡ, ಡಿವೈಎಸ್​ಪಿ ಮಲ್ಲೇಶ್, ಇನ್ಸ್​ಪೆಕ್ಟರ್ ಮುತ್ತುರಾಜ್ ಹಾಗೂ ಕಾರ್ಯಪಾಲಕ ಅಭಿಯಂತರ ಮಹದೇವ ಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ನಾಲ್ವರ ಪ್ರಾಣ ಉಳಿಸಿತು ಸೀಟ್​ ಬೆಲ್ಟ್​ - ವಿಡಿಯೋ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.