thumbnail

ಬೆಂಗಳೂರು: ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕ್ರೇನ್​ ಅಗ್ನಿಗಾಹುತಿ... ವಿಡಿಯೋ

By ETV Bharat Karnataka Team

Published : Oct 3, 2023, 8:11 AM IST

ಬೆಂಗಳೂರು: ಚಲಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೃಹತ್ ಗಾತ್ರದ ಕ್ರೇನ್ ಹೊತ್ತಿ ಉರಿದ ಘಟನೆ ತಡರಾತ್ರಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ವರ್ತೂರಿನಿಂದ ಬಿಡದಿಗೆ ತೆರಳುತ್ತಿದ್ದ ಕ್ರೇನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಚಾಲಕ ವಾಹನವನ್ನು ನಿಧಾನಗೊಳಿಸಿದ. ಆದರೆ, ಬೆಂಕಿಯ ಜ್ವಾಲೆ ಹೆಚ್ಚಾಗಿ ನೋಡನೋಡುತ್ತಿದ್ದಂತೆ ರಸ್ತೆಯಲ್ಲಿ ಕ್ರೇನ್ ಧಗಧಗನೇ ಹೊತ್ತಿ ಉರಿದಿದೆ. ಯಲಚೇನಹಳ್ಳಿ ತಲುಪುವಾಗ ಕ್ರೇನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕ್ರೇನ್ ನಿಲ್ಲಿಸಿದ ಚಾಲಕ ಹಾಗೂ ಇಬ್ಬರು ಸಿಬ್ಬಂದಿ ಕ್ರೇನ್​ನಿಂದ ಹೊರ ಬಂದಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಇಡೀ ಕ್ರೇನ್ ಹೊತ್ತಿ ಉರಿದಿದೆ. ಇನ್ನು ರಸ್ತೆಯ ಪಕ್ಕದಲ್ಲೇ ಎರಡು ಪೆಟ್ರೋಲ್ ಬಂಕ್​ಗಳು ಇದ್ದುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಸ್ವಲ್ಪ ಸಮಯ ರಸ್ತೆಯಲ್ಲಿ ವಾಹನಗಳನ್ನು ಸಂಚಾರವನ್ನು ನಿಲ್ಲಿಸಲಾಗಿತ್ತು. ಸದ್ಯ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ರೀತಿ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿರುವ ಘಟನೆ ಮಂಡ್ಯದ ಶ್ರೀ ರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗೇಟ್ ಬಳಿ ಸೆಪ್ಟೆಂಬರ್​ 9 ರಂದು ನಡೆದಿತ್ತು.

ಇದನ್ನೂ ಓದಿ: ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಅಗ್ನಿಗಾಹುತಿ: ವಿಡಿಯೋ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.