thumbnail

By

Published : Dec 12, 2022, 12:57 PM IST

Updated : Feb 3, 2023, 8:35 PM IST

ETV Bharat / Videos

ಬೆಳ್ತಂಗಡಿ: ನೆರಿಯದ ಅಣಿಯೂರು ನದಿಯ ಸೇತುವೆ ಬಳಿ ಒಂಟಿ ಸಲಗ ಪ್ರತ್ಯಕ್ಷ

ಬೆಳ್ತಂಗಡಿ (ಮಂಗಳೂರು): ಒಂಟಿ ಸಲಗವೊಂದು ಡಿ.12 ರಂದು ಬೆಳಗ್ಗೆ ಸುಮಾರು 6:45ಕ್ಕೆ ಬೆಳ್ತಂಗಡಿ ತಾಲೂಕಿನ ನೆರಿಯದ ಅಣಿಯೂರು ನದಿಯ ಸೇತುವೆಯ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ. ಅಲ್ಲದೇ ಆನೆಯ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ‌. ಚಾರ್ಮಾಡಿ, ನೆರಿಯ ಸೇರಿದಂತೆ ತಾಲೂಕಿನ ಹಲವೆಡೆ ಆನೆಗಳು ಕೃಷಿ ತೋಟಕ್ಕೆ ನುಗ್ಗಿ ಹಾನಿ ಮಾಡುತ್ತಿವೆ. ಈ ನಡುವೆ ಪೇಟೆಯಲ್ಲಿ ಆನೆ ಕಂಡುಬಂದಿದ್ದು, ಮತ್ತಷ್ಟು ಭಯವುಂಟು ಮಾಡಿದೆ. ತಕ್ಷಣ ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
Last Updated : Feb 3, 2023, 8:35 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.