ಅಕ್ರಮ ಗೋ ಹತ್ಯೆ ಆರೋಪ: ತಪಿತಸ್ಥರ ವಿರುದ್ದ ಕಠಿಣ ಕ್ರಮದ ಭರವಸೆ ನೀಡಿದ ಪೊಲೀಸ್ ಕಮಿಷನರ್

By

Published : Feb 8, 2023, 4:10 PM IST

Updated : Feb 14, 2023, 11:34 AM IST

thumbnail

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಕ್ರಮ ಕಸಾಯಿಖಾನೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗೋಹತ್ಯೆಯ ಕುರಿತಂತೆ ತನಿಖೆ ನಡೆಸಲು ಪೊಲೀಸ್ ಇಲಾಖೆ ಮುಂದಾಗಿದೆ. ಕಸಾಯಿಖಾನೆಯಲ್ಲಿ ನೂರಾರು ಗೋವುಗಳ ಹತ್ಯೆ ಮಾಡುತ್ತಿರುವ ಬಗ್ಗೆ ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್​ಗೆ ವಿಡಿಯೋ ಮೂಲಕ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮಣ‌ ಗುಪ್ತಾ ತನಿಖೆ ನಡೆಸಿ ಕಾನೂನು ಕ್ರಮಗಳನ್ನು ಜರುಗಿಸುವ ಭರವಸೆ ನೀಡಿದ್ದಾರೆ. 

ಪೊಲೀಸ್ ಕಮೀಷನರ್ ರಮಣ‌ ಗುಪ್ತಾ ಅವರು ಮಾತನಾಡಿ," ದೂರು ಸ್ವೀಕರಿಸಲಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಯಾರೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದರೂ ಸೂಕ್ತ ಕ್ರಮ ಕೈಗೊಳ್ಳುತ್ತೇವೆ" ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ: ವಾಣಿಜ್ಯ ನಗರಿಯಲ್ಲಿ ಗೋ ಹತ್ಯೆ: ವಿಡಿಯೋ ಮೂಲಕ ಕಮೀಷನರ್​ಗೆ ದೂರು‌ ಕೊಟ್ಟ ವಿಹೆಚ್​ಪಿ

Last Updated : Feb 14, 2023, 11:34 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.