thumbnail

ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಆಟೋ: ಎಂಟು ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

By ETV Bharat Karnataka Team

Published : Nov 22, 2023, 1:08 PM IST

ವಿಶಾಖಪಟ್ಟಣ (ಆಂಧ್ರಪ್ರದೇಶ): ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋವೊಂದು ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ಪರಿಣಾಮ ಆಟೋದಲ್ಲಿದ್ದ ಎಂಟು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ವಿಶಾಖಪಟ್ಟಣದ ಸಂಗಮ್​ ಸರತ್​ ಥಿಯೇಟರ್​ ಬಳಿಯ ಜಂಕ್ಷನ್​ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಘಟನೆ ಬಗ್ಗೆ ಡಿಸಿಪಿ ಶ್ರೀನಿವಾಸ್​ ರಾವ್ ಮಾಹಿತಿ ನೀಡಿ, ಆಟೋದಲ್ಲಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಅಪಘಾತದಲ್ಲಿ ಎಂಟು ಮಕ್ಕಳು ಗಾಯಗೊಂಡಿದ್ದು, ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ನಾಲ್ವರು ಮಕ್ಕಳಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಉಳಿದ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ. ಅವರಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಅವರು​ ತಿಳಿಸಿದ್ದಾರೆ.

ಲಾರಿ ಚಾಲಕ ಹಾಗೂ ಕ್ಲೀನರ್​ ಅನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ವಿಡಿಯೋ ಹತ್ತಿರದ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ವೀಣಾ ಕಾಶಪ್ಪನವರ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಕಾಂಗ್ರೆಸ್ ನಾಯಕಿ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.