thumbnail

ಹುಬ್ಬಳ್ಳಿ ಚಿಗರಿ ಬಸ್‌ನಲ್ಲಿ ಬೆಂಕಿ: 30ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರು

By ETV Bharat Karnataka Team

Published : Dec 6, 2023, 5:28 PM IST

ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ನಡುವೆ ತ್ವರಿತ ಬಸ್ ಸೇವೆ ನೀಡುವ ಬಿಆರ್​ಟಿಎಸ್ ಚಿಗರಿ ಬಸ್​​ನಲ್ಲಿ​ ಇಂದು ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಎ.ಪಿ.ಎಂ.ಸಿ ನಿಲುಗಡೆ ಬಿಆರ್‌ಟಿಎಸ್ ಬಸ್ ನಂ. KA-25 / F-3472ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ವೇಳೆ ಬಸ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಎಚ್ಚೆತ್ತ ಬಸ್ ಚಾಲಕ, ಕೂಡಲೇ ಪ್ರಯಾಣಿಕರನ್ನು ಬಸ್​ನಿಂದ ಇಳಿಸಿದ್ದಾರೆ. ಬಳಿಕ ಬಸ್​ಗೆ ಹತ್ತಿದ್ದ ಬೆಂಕಿ ನಂದಿಸಲು ಯತ್ನಿಸಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದೆ. ಚಿಗರಿ ಬಸ್​ಗಳಲ್ಲಿ ಆಗಾಗ ಇಂತಹ ಘಟನೆಗಳು ಸಂಭವಿಸುತ್ತಲೇ ಇವೆ.‌ ಇದರಿಂದ ಪ್ರಯಾಣಿಕರು ಆತಂಕದಲ್ಲಿಯೇ ಬಸ್​ಗಳಲ್ಲಿ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್​ನ ಸಮರ್ಪಕ ನಿರ್ವಹಣೆ ಮಾಡದಿರುವುದೇ ಅವಘಡಗಳಿಗೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಕಳೆದ ನವೆಂಬರ್​ ತಿಂಗಳಲ್ಲಿ ಕೆಎಸ್​ಆರ್​ಟಿಸಿ ಬಸ್​ನ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್​ ಸಂಪೂರ್ಣ ಸುಟ್ಟು ಕರಕಲಾಗಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿತ್ತು. ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ : KSRTC ಬಸ್​​​ಗೆ ಬೆಂಕಿ; ತಪ್ಪಿದ ಭಾರಿ ಅನಾಹುತ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.