ಬೆಂಗಳೂರು: ಭಯ ಹುಟ್ಟಿಸುವಂತೆ ಸ್ಕೂಟರ್ ಚಲಾಯಿಸಿದ ಯುವಕರು... ವಿಡಿಯೋ!

By

Published : Jun 12, 2023, 2:11 PM IST

thumbnail

ಬೆಂಗಳೂರು : ಕಂಠಪೂರ್ತಿ ಕುಡಿದ ಅಮಲಿನಲ್ಲಿ‌ ಅಡ್ಡಾದಿಡ್ಡಿ ಸ್ಕೂಟರ್ ಚಲಾಯಿಸಿದ ಯುವಕರಿಬ್ಬರು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ಕೆಂಗೇರಿಯ ಜ್ಞಾನಭಾರತಿ ಕ್ಯಾಂಪಸ್​ ಬಳಿ ನಡೆದಿದೆ. ಮದ್ಯದ ಅಮಲಿನಲ್ಲಿ ಹೋಂಡಾ ಆಕ್ಟಿವಾದಲ್ಲಿ ಬಂದ ಯುವಕರಿಬ್ಬರು ಬೇಕಾಬಿಟ್ಟಿ ರಸ್ತೆಯಲ್ಲಿ ಸಂಚರಿಸುವ ಮೂಲಕ ಇತರೆ ವಾಹನ ಸವಾರರಿಗೆ ಭೀತಿ ಹುಟ್ಟಿಸಿದ್ದಾರೆ‌. ಕುಡುಕರ ಉಪಟಳ ಕಾರಿನ ಹಿಂಬದಿ ಡ್ಯಾಷ್ ಕ್ಯಾಮರಾದಲ್ಲಿ ಸೆರೆಯಾಗಿದೆ‌.

ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿ ಅಪಘಾತ : ಚಪ್ಪಲಿ ಏಟು ಕೊಟ್ಟ ಮಹಿಳೆ - ವಿಡಿಯೋ

ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಕೂಟರ್ ವಶಕ್ಕೆ ಪಡೆದಿದ್ದಾರೆ. ಇನ್ನು ವಾರಾಂತ್ಯ ಬಂತೆಂದರೆ ಜ್ಞಾನಭಾರತಿ ಯೂನಿವರ್ಸಿಟಿ ಕ್ಯಾಂಪಸ್​ನಲ್ಲಿ ಕುಡುಕರ ಹಾವಳಿ ಅತಿಯಾಗಲಿದ್ದು, ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಾರೆ ಎಂಬುದು ಸ್ಥಳೀಯರ ಆರೋಪ‌ವಾಗಿದೆ. 

ಇದನ್ನೂ ಓದಿ : Road Accident : ಬೆಳಗ್ಗೆಯೇ ಟೈಟಾದ ಡ್ರೈವರ್.. ಚಿಂತಾಮಣಿಯಲ್ಲಿ ಪಾದಚಾರಿ ಸೇರಿ 7 ಮಂದಿಗೆ ಡಿಕ್ಕಿ ಹೊಡೆದ ಆಟೋ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.