thumbnail

By

Published : Feb 20, 2023, 9:12 AM IST

ETV Bharat / Videos

ಕಡಬದಲ್ಲಿ ಕಾಡಾನೆ ದಾಳಿ; ಯುವತಿ ಸೇರಿ ಇಬ್ಬರು ಸಾವು

ಕಡಬ(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಸಮೀಪದ ಮೀನಾಡಿ ಎಂಬಲ್ಲಿ ಇಂದು ಮುಂಜಾನೆ ಕಾಡಾನೆ ದಾಳಿ ನಡೆಸಿದ್ದು, ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಇಲ್ಲಿನ ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಮೀನಾಡಿ ಎಂಬಲ್ಲಿ ಆನೆ ದಾಳಿ ಮಾಡಿದೆ. 

ಇದೇ ವೇಳೆ, ಅಲ್ಲೇ ಇದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೂ ಆನೆ ತನ್ನ ಅಟ್ಟಹಾಸ ಮೆರೆದಿದೆ. ಗಂಭೀರ ಗಾಯಗೊಂಡಿದ್ದ ರಮೇಶ್ ರೈ ಸ್ಥಳದಲ್ಲಿಯೇ ಮೃತಪಟ್ಟಿದ್ದು, ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮುಗಿಯದ ಪ್ರಾಣಿ - ಮಾನವ ಸಂಘರ್ಷ: ಮಲೆನಾಡಿಗರಿಗೆ ಕಾಡಾನೆ ಜೊತೆ ಹುಲಿ ಕಾಟ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.