ಸತೀಶ್​ ಜಾರಕಿಹೊಳಿಗೆ ಡಿಸಿಎಂ‌ ಸ್ಥಾನ ಕೊಡಿ: ಬೆಳಗಾವಿಯಲ್ಲಿ‌ ಅಭಿಮಾನಿಗಳ ಆಗ್ರಹ - ಈಟಿವಿ ಭಾರತ್​ ಕನ್ನಡ ನ್ಯೂಸ್

🎬 Watch Now: Feature Video

thumbnail

By

Published : May 17, 2023, 5:52 PM IST

ಬೆಳಗಾವಿ : ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಸತೀಶ್​ ಜಾರಕಿಹೊಳಿ ಅಭಿಮಾನಿ ಬಳಗ ಮತ್ತು ಸರ್ವಧರ್ಮಗಳ ಮುಖಂಡರು ಇಂದು ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 

ಕೈಯಲ್ಲಿ ಸತೀಶ್​ ಜಾರಕಿಹೊಳಿಯವರ ಪೋಸ್ಟರ್ ಹಿಡಿದು, ಡಿಸಿಎಂ ಸ್ಥಾನ ನೀಡುವಂತೆ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ್​ ಜಾರಕಿಹೊಳಿ ಬೆಂಬಲಿಗ ಸುರೇಶ ಗವನ್ನವರ, ಸತೀಶ ಜಾರಕಿಹೊಳಿ ಅವರಿಗೆ ಕರ್ನಾಟಕದಲ್ಲಿ ಅವರದ್ದೇ ಆದ ಗೌರವವಿದೆ. ಪಕ್ಷದ ಸಿದ್ಧಾಂತಗಳೊಂದಿಗೆ ಇಡೀ ರಾಜ್ಯ ಸುತ್ತಾಡಿ, ಪಕ್ಷ ಸಂಘಟಿಸಿ‌ ಬಲಿಷ್ಠಗೊಳಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ನ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು​ ಸೇರಿ ಎಲ್ಲರೂ ಒಗ್ಗಟ್ಟಾಗಿ ಸತೀಶ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.      

ಅಹಿಂದ ನಾಯಕರಾಗಿರುವ ಸತೀಶ ಜಾರಕಿಹೊಳಿ ಬೆಳಗಾವಿ ಅಷ್ಟೇ ಅಲ್ಲದೇ ಇಡೀ ಉತ್ತರಕರ್ನಾಟಕದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತಂದು ಕೊಟ್ಟಿದ್ದಾರೆ. ಒಂದು ವೇಳೆ ಸತೀಶ ಜಾರಕಿಹೊಳಿ ಅವರಿಗೆ ಡಿಸಿಎಂ ಸ್ಥಾನ ನೀಡದಿದರೇ ನಾವೆಲ್ಲಾ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸುರೇಶ ಗವನ್ನವರ ಎಚ್ಚರಿಸಿದರು‌.       

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.