ಚಿಕ್ಕಬಳ್ಳಾಪುರದಲ್ಲಿ ಆಕಸ್ಮಿಕ ಬೆಂಕಿ: ಐವತ್ತು ಕುರಿಗಳು ಸಜೀವ ದಹನ - ಕುರಿ ಕಟ್ಟಿದ್ದ ಸ್ಥಳಕ್ಕೆ ಆಕಸ್ಮಿಕವಾಗಿ ಬೆಂಕಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17414627-thumbnail-3x2-ck.jpg)
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮೂಗರೆಡ್ಡಿಪಲ್ಲಿ ಗ್ರಾಮದಲ್ಲಿ ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಐವತ್ತು ಕುರಿಗಳು ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ಗ್ರಾಮದ ನಾರಾಯಣ ನಾಯಕ್ ರವರು ತಮ್ಮ ಜೀವನಾಧರಕ್ಕಾಗಿ ಗ್ರಾಮದ ಹೊರವಲಯದಲ್ಲಿ ಕುರಿ ಸಾಕಾಣಿಕೆ ಮಾಡುತ್ತಿದ್ದರು. ಆದರೆ, ನಿನ್ನೆ ರಾತ್ರಿ ಕುರಿ ಕಟ್ಟಿದ್ದ ಸ್ಥಳಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ, ಸುಮಾರು 50ಕ್ಕೂ ಹೆಚ್ಚು ಕುರಿಗಳು ಸುಟ್ಟು ಕರಕಲಾಗಿವೆ. ಇದರಿಂದ ಕುರಿಗಾಯಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
Last Updated : Feb 3, 2023, 8:38 PM IST