ಗಂಗಾವತಿ: ರಾತ್ರೋರಾತ್ರಿ ಹೊತ್ತಿ ಉರಿದ ಜ್ಯುವೆಲರಿ, ಅಪಾರ ಪ್ರಮಾಣದ ಚಿನ್ನ ಸುಟ್ಟು ಕರಗಿರುವ ಶಂಕೆ - ಆಭರಣ ಸುಟ್ಟು ಕರಕಲಾಗಿರುವ ಘಟನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/02-12-2023/640-480-20164036-thumbnail-16x9-sefedd.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Dec 2, 2023, 8:30 AM IST
|Updated : Dec 2, 2023, 12:35 PM IST
ಗಂಗಾವತಿ: ಚಿನ್ನಾಭರಣ ಅಂಗಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಆಸ್ತಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಸಂಭವಿಸಿದೆ. ಗಂಗಾವತಿ ನಗರದ ಹೃದಯ ಭಾಗದಲ್ಲಿರುವ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಆ ಕಟ್ಟಡದಲ್ಲಿದ್ದ ಜ್ಯುವೆಲರಿ ಶಾಪ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ನಗರದ ಗಣೇಶ ಸರ್ಕಲ್ನಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಕಟ್ಟಡದಲ್ಲಿ ಕೆಜೆಪಿ ಜ್ಯುವೆಲರಿ ಶಾಪ್ ಇದೆ. ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮೂರು ಅಂತಸ್ತಿಗೆ ಆವರಿಸಿದೆ. ಹೀಗಾಗಿ ಶಾಪ್ನಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣ ಸೇರಿದಂತೆ ಇತರ ವಸ್ತುಗಳು ಸುಟ್ಟು ಕರಕಲಾಗಿರುವ ಶಂಕೆ ವ್ಯಕ್ತವಾಗಿದೆ.
ಕೆಜೆಪಿ ಜ್ಯುವೆಲರಿ ಶಾಪ್ ಹುಬ್ಬಳ್ಳಿಯ ಖ್ಯಾತ ಚಿನ್ನದ ಉದ್ಯಮಿ ಗಣೇಶ್ ಶೇಠ್ ಅವರಿಗೆ ಸೇರಿದ ಅಂಗಡಿ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿತ್ತು. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಬಂದು ಕಾರ್ಯ ನಿರ್ವಹಿಸಿದರು ಸಹ ಬೆಂಕಿ ಹತೋಟಿಗೆ ತರಲು ಹರಸಾಹಸ ಪಡಬೇಕಾಯಿತು. ಮಧ್ಯರಾತ್ರಿ 12ಕ್ಕೆ ಹರಡಿದ ಬೆಂಕಿಯ ಕೆನ್ನಾಲಿಗೆ ಸುಮಾರು ಗಂಟೆಗಳ ಕಾಲ ಅಗ್ನಿಶಾಮಕ ದಳ ಕೈಗೊಂಡಿದ್ದ ಕಾರ್ಯಾಚರಣೆಯಿಂದ ಕೊನೆಗೂ ಬೆಂಕಿ ಹತೋಟಿಗೆ ಬಂದಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.
ಓದಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ದರೋಡೆ: ಬಂದೂಕು ತೋರಿಸಿ 19 ಕೋಟಿ ದೋಚಿ ಪರಾರಿಯಾದ ಖದೀಮರು