thumbnail

By

Published : Feb 14, 2023, 12:11 PM IST

ETV Bharat / Videos

ಶ್ರೀರಂಗಪಟ್ಟಣದ ಕರಿಘಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನ ಕರಿಘಟ್ಟ ಅರಣ್ಯ ಪ್ರದೇಶದಲ್ಲಿ ಸೋಮಾವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ, ಬೆಟ್ಟದಲ್ಲಿದ್ದ ಗಿಡ, ಮರಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳ, ಅರಣ್ಯ ಇಲಾಖೆಯ ಸಿಬ್ಬಂದಿ, ಪರಿಸರ ಸಂಘಟನೆಗಳು ಹಾಗೂ ಸ್ಥಳೀಯ ಗ್ರಾಮಗಳ ಜನರೆಲ್ಲ ಸೇರಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಕಿ ಅವಘಡದಿಂದ ಅರಣ್ಯ ಪ್ರದೇಶದಲ್ಲಿಯ ಹಲವಾರು ಪ್ರಾಣಿಗಳು ಕೂಡ ಸಜೀವವಾಗಿ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. 

ಕರಿಘಟ್ಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿಲ್ಲ ಬದಲಿಗೆ ಯಾರೋ ಕಿಡಿಗೇಡಿಗಳು ಬೇಕಂತಲೇ ಬೆಂಕಿ ಹಚ್ಚಿ ಕರಿಘಟ್ಟವನ್ನ ಬೆಂಕಿಯ ಕೆನ್ನಾಲಿಗೆಗೆ ಸಿಲುಕುವಂತೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕರಿಘಟ್ಟ ಬೆಟ್ಟದ ತಪ್ಪಲಿನ ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಬೆಟ್ಟದ ಕುರುಚಲು ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿಯಿಂದಾಗಿ ಅರಣ್ಯದಲ್ಲಿನ ಔಷಧೀಯ ಸಸ್ಯಗಳು, ಚಿಕ್ಕ ಪುಟ್ಟ ಗಿಡ ಮರಗಳು, ಪ್ರಾಣಿ, ಪಕ್ಷಿಗಳು ಸಂಕುಲ ನಾಶವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ.ಎಂ.ಹೊಸೂರು ಭಾಗದಿಂದ ಸುತ್ತಲು ಆವರಿಸಿದ ಬೆಂಕಿಯ ಜ್ವಾಲೆಯನ್ನು ನಂದಿಸಲು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು. 

ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.