ಕೋಲಾರದಲ್ಲಿ ಬಿಎಸ್​ಎಫ್​ ಸಿಬ್ಬಂದಿ ಮೇಲೆ ಜನರಿಂದ ಪುಷ್ಪವೃಷ್ಟಿ: ವಿಡಿಯೋ

By

Published : Apr 5, 2023, 12:36 PM IST

Updated : Apr 5, 2023, 3:37 PM IST

thumbnail

ಕೋಲಾರ: ರಾಜ್ಯ ವಿಧಾನಸಭೆ ಚುನಾವಣೆ ರಂಗೇರಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುವ ಕೋಲಾರ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ವಿಪಕ್ಷ ನಾಯಕ ಇಲ್ಲಿ ಸ್ಪರ್ಧೆ ಮಾಡುತ್ತಾರೋ ಇಲ್ಲವೋ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಈ ಮಧ್ಯೆ ಜಿಲ್ಲೆಯಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಬಿಎಸ್‌ಎಫ್ ಸಿಬ್ಬಂದಿಯ ಮೇಲೆ ಸ್ಥಳೀಯರು ಪುಷ್ಪವೃಷ್ಟಿ ಮಾಡಿದ್ದಾರೆ.

ನಗರದ ರಸ್ತೆಗಳಲ್ಲಿ ಸಂಚರಿಸುತ್ತಿದ್ದ ಬಿಎಸ್​ಎಫ್​ ಸಿಬ್ಬಂದಿ ಮೇಲೆ ಎಲ್ಲ ಜನರೂ ಗೌರವಪೂರ್ವಕವಾಗಿ ಹೂವಿನ ದಳಗಳನ್ನು ಹಾಕಿದ್ದಾರೆ. ಇದಲ್ಲದೇ, ಬಾಲಕಿಯೊಬ್ಬಳು ಪ್ರತಿ ಯೋಧರಿಗೂ ಗುಲಾಬಿ ಹೂವನ್ನು ನೀಡುತ್ತಿರುವ ವಿಡಿಯೋ ವೈರಲ್​ ಆಗಿದೆ. ದೇಶ ಕಾಯುವ ಯೋಧರಿಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ ಎಂದು ಜನರು ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿಕೊಂಡಿದ್ದರು. ವರುಣಾದಿಂದ ಅವರಿಗೆ ಟಿಕೆಟ್​ ನೀಡಲಾಗಿದೆ. ಇಲ್ಲಿಂದಲೂ ಅವರು ಸ್ಪರ್ಧೆ ಮಾಡುವ ಆಸಕ್ತಿ ಹೊಂದಿದ್ದಾರೆ. ಕಾಂಗ್ರೆಸ್​ 2ನೇ ಪಟ್ಟಿಯಲ್ಲಿ ಟಿಕೆಟ್​ ಘೋಷಣೆ ಆಗುವ ನಿರೀಕ್ಷೆ ಹೊಂದಿದ್ದಾರೆ.

ಓದಿ: ನಟ ಸುದೀಪ್ ಬಿಜೆಪಿ ಸೇರ್ಪಡೆ ಕುರಿತು ಪಕ್ಷದಲ್ಲಿ ಚರ್ಚೆಯಾಗುತ್ತಿದೆ ಎಂದ ಸಿಎಂ.. ಮಾಹಿತಿ ಇಲ್ಲ ಎಂದ ರಾಮುಲು

Last Updated : Apr 5, 2023, 3:37 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.