ಮಹಾಕಾಳೇಶ್ವರನ ಆಶೀರ್ವಾದ ಪಡೆದ ಕ್ರಿಕೆಟರ್ ಅಕ್ಷರ್ ಪಟೇಲ್ ಮತ್ತು ಮೇಹಾ ಜೋಡಿ
ಉಜ್ಜಯಿನಿ (ಮಧ್ಯ ಪ್ರದೇಶ): ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಭಾರತ ತಂಡದ ಆಲ್ರೌಂಡರ್ ಅಕ್ಷರ್ ಪಟೇಲ್ ಪತ್ನಿಯೊಂದಿಗೆ ಮೊದಲ ಬಾರಿಗೆ ಸಾರ್ವಜನಿಕ ಪ್ರದೇಶದಲ್ಲಿ ಕಾಣಿಸಿಕೊಂಡರು. ಮೂರನೇ ಟೆಸ್ಟ್ ನಡುವೆ 9 ದಿನ ಅಂತರ ಇರುವ ಹಿನ್ನೆಲೆಯಲ್ಲಿ ಪತ್ನಿಯ ಜೊತೆಗೆ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.
ಸೋಮವಾರ ಬೆಳಗಿನ ಜಾವ 03:00 ಗಂಟೆಗೆ ದೇವಾಸ್ಥಾನದ ವಿಶೇಷ ಪೂಜಾ ಸಂದರ್ಭವಾದ ಭಸ್ಮಾರತಿಯ ವೇಳೆ ಪಾಲ್ಗೊಂಡು ಸೇವೆ ಸಲ್ಲಿಸಿದ್ದಾರೆ. ಆರತಿ ನಂತರ ದೇವಾಲಯದ ಒಳಗೆ ತೆರಳಿ ಅಭಿಷೇಕ ಮಾಡಿ ಬಾಬಾ ಅವರ ಆಶೀರ್ವಾದ ಪಡೆದಿದ್ದಾರೆ. ಅಕ್ಷರ್ ಪಟೇಲ್ ಮತ್ತು ಮೇಹಾ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇತ್ತೀಚೆಗೆ ಮದುವೆಯಾದ ಸ್ಟಾರ್ ಜೋಡಿ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಕೂಡಾ ಭಾನುವಾರ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.
ಇದನ್ನೂ ಓದಿ: ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ಪರ ಅತೀ ಹೆಚ್ಚು ಟೆಸ್ಟ್ ಸ್ಕೋರರ್