ನನ್ನ ಪ್ರಕಾರ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ.. ಜೆಡಿಎಸ್​ ಜೊತೆ ಮೈತ್ರಿ ಮಾತೇ ಇಲ್ಲ: ಜಗದೀಶ್ ಶೆಟ್ಟರ್

By

Published : May 10, 2023, 9:09 PM IST

thumbnail

ಹುಬ್ಬಳ್ಳಿ: ''ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬೇರೆ ಯಾವುದೇ ಪಕ್ಷದೊಂದಿಗೆ ಹಾಗೂ ವಿಶೇಷವಾಗಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ'' ಎಂದು ಮಾಜಿ ಸಿಎಂ ಹುಬ್ಬಳ್ಳಿ - ಧಾರವಾಡ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇಲ್ಲಿ ತಮ್ಮ ನಿವಾಸದಲ್ಲಿ ಎಎನ್​ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ''ನನ್ನ ಅಭಿಪ್ರಾಯದ ಪ್ರಕಾರ, ಕಾಂಗ್ರೆಸ್​ ಪಕ್ಷಕ್ಕೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಲಭಿಸಲಿದೆ. ಚುನಾವಣೆ ಪ್ರಕ್ರಿಯೆಯನ್ನು ಬಿಜೆಪಿ ಪಕ್ಷವು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿದೆ. ಇದರಿಂದ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ'' ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಮೊದಲಿನಿಂದಲೂ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಮತ್ತು 6 ಬಾರಿ ಭಾರತೀಯ ಜನತಾ ಪಕ್ಷದಿಂದ ಗೆದ್ದು ಬಂದಿದ್ದ ಜಗದೀಶ್​ ಶೆಟ್ಟರ್​ ಅವರು ಬಿಜೆಪಿಯಿಂದ ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್​ ಸೇರಿದ್ದರು. ಬಳಿಕ ಕಾಂಗ್ರೆಸ್​ ಅಭ್ಯರ್ಥಿಯಾಗಿ ಅಖಾಡಕ್ಕಿಳಿದರು. ಇದೀಗ ಅವರ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದ್ದು, ಕುತೂಹಲ ಮೂಡಿಸಿದೆ. 

ಇವುಗಳನ್ನು ಓದಿ: ಬೆಂಗಳೂರಿನ 28 ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇಕಡಾವಾರು ಮತದಾನ ಎಷ್ಟು? ಇಲ್ಲಿದೆ ಮಾಹಿತಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.