thumbnail

By ETV Bharat Karnataka Team

Published : Sep 22, 2023, 7:19 PM IST

ETV Bharat / Videos

ಸಾರಿಗೆ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ಉಳಿದವು 40 ಬಡ ಜೀವಗಳು!

ದಾವಣಗೆರೆ: ಸಾರಿಗೆ ಇಲಾಖೆಯ ಬಸ್​ ಬ್ರೇಕ್ ಫೇಲ್ ಆಗಿದ್ದು ಭಾರೀ ದುರಂತವೊಂದು ತಪ್ಪಿದ ಘಟನೆ ದಾವಣಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 04ರ ಹೆಬ್ಬಾಳ್​ ಟೋಲ್ ಗೇಟ್ ಬಳಿ ಇಂದು ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ 40 ಬಡ ಜೀವಗಳು ಪ್ರಾಣಾಪಾಯದಿಂದ ಪಾರಾಗಿವೆ. 

ಚಿತ್ರದುರ್ಗದಿಂದ ದಾವಣಗೆರೆಯತ್ತ ಬರುತ್ತಿದ್ದ ಬಸ್ ಹೆಬ್ಬಾಳ್ ಟೋಲ್ ಗೇಟ್ ಬಳಿ ಇದ್ದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿದೆ. ಈ ವೇಳೆ ಚಾಲಕ ಬಸವರಾಜ್ ಪ್ರಯಾಣಿಕರ ಪ್ರಾಣ ಉಳಿಸಲು ಪ್ರಯತ್ನಿಸಿದರೂ ಬಸ್ ಮಾತ್ರ ನಿಯಂತ್ರಣಕ್ಕೆ ಸಿಕ್ಕಿಲ್ಲ. ಟೋಲ್ ಗೇಟ್ ಹಳಿ ಬರುತ್ತಿದ್ದಂತೆ ಮೊದಲು ಅಲ್ಲಿದ್ದ ಚರಂಡಿಯ ಮೇಲೆ ಹತ್ತಿಸಿ ಅದರ ವೇಗ ತಗ್ಗಿಸಿದ್ದಾರೆ. ನಿಯಂತ್ರಣಕ್ಕೆ ಬಂದ ಬಳಿಕ ಖಾಲಿ ಜಾಗದಲ್ಲಿ ಬಸ್​ ಅನ್ನು ನಿಲ್ಲಿಸುವಲ್ಲಿ ಬಸವರಾಜ್ ಯಶಸ್ವಿಯಾಗಿದ್ದಾರೆ. ಅಲ್ಲಿಯವರೆಗೂ ಭಯದಲ್ಲಿದ್ದ 40 ಪ್ರಯಾಣಿಕರು, ಬಸ್ ಸುರಕ್ಷಿತವಾಗಿ​ ನಿಲ್ಲುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ. 

ತಮ್ಮ ಜೀವ ಉಳಿಸಿದ ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಾಲಕ ಸೇರಿದಂತೆ ಕೆಲ ಪ್ರಯಾಣಿಕರಿಗೆ ಚಿಕ್ಕ-ಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದರು. 

ಇದನ್ನೂ ಓದಿ: ನ್ಯೂಯಾರ್ಕ್ ಹೆದ್ದಾರಿಯಲ್ಲಿ ಭೀಕರ ಬಸ್‌ ಅಪಘಾತ: ಇಬ್ಬರು ಸಾವು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.