thumbnail

By

Published : Apr 26, 2023, 12:37 PM IST

ETV Bharat / Videos

ಕುಂದಗೋಳ ಕ್ಷೇತ್ರದಲ್ಲಿ ಯಾವುದೇ ಬಂಡಾಯವಿಲ್ಲ, ನಾವೆಲ್ಲ ಒಗ್ಗಟ್ಟಿನಿಂದಿದ್ದೇವೆ: ಕುಸುಮಾವತಿ ಶಿವಳ್ಳಿ

ಹುಬ್ಬಳ್ಳಿ: ಕಾಂಗ್ರೆಸ್​ನ ಗ್ಯಾರಂಟಿ‌ ಕಾರ್ಡ್ ನಿಂದ ಕುಂದಗೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಗೆದ್ದು ಬರುವುದು ನಿಶ್ಚಿತ ಎಂದು ಕುಂದಗೋಳ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಕುಂದಗೋಳ ಕ್ಷೇತ್ರದಲ್ಲಿ ಯಾವುದೇ ಬಂಡಾಯವಿಲ್ಲ ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಪ್ರಚಾರ ಕಾರ್ಯ ನಡೆಸಲಾಗುತ್ತಿದೆ. ಅಲ್ಲದೇ ಕ್ಷೇತ್ರದಲ್ಲಿ ಜನರಿಂದ ಪಕ್ಷಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.‌ ಈ ಬಾರಿಯೂ ಕಾಂಗ್ರೆಸ್​​ ಪಕ್ಷವನ್ನೇ ಮತ್ತೊಮ್ಮೆ ಅಧಿಕಾರಕ್ಕೆ ತರಲು ಇಲ್ಲಿಯ ಜನ ತೀಮಾರ್ನಿಸಿದ್ದಾರೆ ಎಂದರು. 

ಕ್ಷೇತ್ರದಲ್ಲಿ ಈ ಗಾಗಲೆ ಉತ್ತಮ ಕೆಲಸಗಳು, ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇವೆ. ಇನ್ನು ಮುಂದೆಯೂ ಕೂಡ ಸಾಕಷ್ಟು ಯೋಜನೆ ಹಾಕಿಕೊಂಡಿದ್ದೇವೆ ಎಂದು ಹೇಳಿದರು.‌ ಜಗದೀಶ್ ಶೆಟ್ಟರ್ ಕಾಂಗ್ರೆಸ್​​ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ಲಾಭವಿದೆ. ಲಿಂಗಾಯತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಮತ ಹಾಕಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ತಾವು 15000 ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ಶಿವಳ್ಳಿ ಅವರು ತಿಳಿಸಿದರು. 

ಇದನ್ನೂ ಓದಿ:  ಹುನಗುಂದ ಕ್ಷೇತ್ರದಲ್ಲಿ ಜನರ ಒಲವು ಬಿಜೆಪಿ ಪರ ಇದೆ: ದೊಡ್ಡನಗೌಡ ಪಾಟೀಲ್​

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.