ಪ್ರವಾಸಕ್ಕೆ ಬಂದು ಕಾವೇರಿ ನಡುಗಡ್ಡೆಯಲ್ಲಿ ಸಿಲುಕಿದ ಕುಟುಂಬ: ಸ್ಥಳೀಯರಿಂದ ರಕ್ಷಣೆ

By

Published : Aug 4, 2023, 9:21 AM IST

Updated : Aug 4, 2023, 11:02 AM IST

thumbnail

ಚಾಮರಾಜನಗರ: ಆರಂಭದಲ್ಲಿ ಮಂಕಾಗಿದ್ದ ಮುಂಗಾರು ಮಳೆ ಬಳಿಕ ರಾಜ್ಯಾದ್ಯಂತ ಬಿರುಸು ಪಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅನೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ನಡುವೆ ಪ್ರವಾಸಕ್ಕೆ ತೆರಳಿದ್ದ ಕುಟುಂಬವೊಂದು ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಶಿವನ ಸಮುದ್ರ‌‌ ಬಳಿಯ ಕಾವೇರಿ ನದಿಯಲ್ಲಿ ಗುರುವಾರ ಸಂಜೆ ನಡೆದಿದೆ. ಅದೃಷ್ಟವಶಾತ್​ ಸ್ಥಳೀಯರು ಹಾಗೂ ತೆಪ್ಪ ಓಡಿಸುವವರ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.‌ 

ಬೆಂಗಳೂರು ಮೂಲದ ಕುಟುಂಬವೊಂದು ಕಾವೇರಿ ನದಿಯ ನಡುಗಡ್ಡೆಗೆ ಪ್ರವಾಸಕ್ಕೆ ತೆರಳಿತ್ತು. ಆದರೆ, ದಿಢೀರ್ ನೀರು ಹೆಚ್ಚಾದ ಕಾರಣ ವಾಪಸ್ ಬರಲಾಗದೇ ಕುಟುಂಬಸ್ಥರು ಕೂಗಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಹಗ್ಗದ ಸಹಾಯದಿಂದ 4 ವರ್ಷದ ಬಾಲಕಿ, 8 ವರ್ಷದ ಬಾಲಕ, ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ರಕ್ಷಿಸಿ ದಡಕ್ಕೆ ಸೇರಿಸಿದ್ದಾರೆ. ಈ ಹಿಂದೆ ಹಲವರು ಇದೇ ರೀತಿ ನೀರಿಗಿಳಿದು ಪ್ರಾಣ ಕಳೆದುಕೊಂಡಿದ್ದರು. ಒಟ್ಟಿನಲ್ಲಿ ಸ್ಥಳೀಯರ ಸಮಯಪ್ರಜ್ಞೆ ಹಾಗೂ ಮಾನವೀಯ ನೆರವಿನಿಂದ ಇಡೀ ಕುಟುಂಬ ಜಲಕಂಟಕದಿಂದ ಪಾರಾಗಿದೆ. 

ಇದನ್ನೂ ಓದಿ:  ಹಾಸನ: ಮೈದುಂಬಿ ಹರಿಯುತ್ತಿರುವ ಮೂಕನಮನೆ ಜಲಪಾತ.. ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗನ ರಕ್ಷಣೆ

Last Updated : Aug 4, 2023, 11:02 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.