ಲೋಕಾಯುಕ್ತ ದಾಳಿ: ₹20 ಸಾವಿರ ಲಂಚ, ಸಿಕ್ಕಿಬಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ - ಹನುಮಂತ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/04-10-2023/640-480-19682923-thumbnail-16x9-mh.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Oct 4, 2023, 10:26 PM IST
ಬೆಂಗಳೂರು : ಲಂಚ ಪಡೆಯುವ ವೇಳೆ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಕವಿನ್ ಬಂಧಿತ ಅಧಿಕಾರಿ. ಇವರನ್ನು ತನಿಖಾಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರು: ಖರ್ಚಿಗೆ ಕಾಸಿಲ್ಲವೆಂದು ಮೊಬೈಲ್ ಶಾಪ್ ದೋಚಿದ್ದ ಯುವಕರ ಬಂಧನ
ವಾಹನ ಬಿಡುಗಡೆ ಮಾಡಲು ಶಿವಕುಮಾರ್ ಎಂಬವರ ಬಳಿ ಇವರು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಿವಕುಮಾರ್ ಲೋಕಾಯಕ್ತಕ್ಕೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡು ಹೆಡ್ ಕಾನ್ಸ್ಟೇಬಲ್ ಕವಿನ್ 20 ಸಾವಿರ ರೂ. ಲಂಚ ಪಡೆಯುವಾಗ ವೇಳೆ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ ಎಂದು ಲೋಕಾಯುಕ್ತ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಬಿಎಂಟಿಸಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಹಾಕಿ ₹16 ಕೋಟಿ ವಂಚನೆ: ಓರ್ವನ ಬಂಧನ