ಲೋಕಸಭಾ ಚುನಾವಣೆ ಮುಂದಿಟ್ಟು ರಾಮನ ಹೆಸರಿನಲ್ಲಿ ರಾಜಕೀಯ ಸರಿಯೇ?: ಶಾಸಕ ಭೀಮಣ್ಣ ನಾಯ್ಕ - ಭೀಮಣ್ಣ ನಾಯ್ಕ

🎬 Watch Now: Feature Video

thumbnail

By ETV Bharat Karnataka Team

Published : Jan 4, 2024, 4:31 PM IST

ಕಾರವಾರ (ಉತ್ತರ ಕನ್ನಡ) : ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ಬಿಜೆಪಿಗರು ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ರಾಮನ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಶಾಸಕ ಭೀಮಣ್ಣ ನಾಯ್ಕ ಕಿಡಿಕಾರಿದ್ದಾರೆ.

ಕಾರವಾರದಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಧರ್ಮವನ್ನು ಎಲ್ಲರೂ ಹಿಂದಿನಿಂದ ಆಚರಣೆ ಮಾಡುತ್ತಿದ್ದಾರೆ. ಇದೀಗ ಪಾರ್ಲಿಮೆಂಟ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಗರು ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಜನರು ಇವರಿಗೆ ತಕ್ಕ ಉತ್ತರ ಕೊಡಲಿದ್ದಾರೆ ಎಂದರು.

ಇನ್ನು ವಿಧಾನ ಪರಿಷತ್ ಸದಸ್ಯ​​ ಬಿ.ಕೆ ಹರಿಪ್ರಸಾದ್ ಗೋಧ್ರಾ ಹತ್ಯಾಕಾಂಡದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಹಿಂದಿನ ಹಿನ್ನೆಲೆ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ. ಚುನಾವಣೆ ಇಲ್ಲವೇ ಇತರೆ ಸಂದರ್ಭದಲ್ಲಿ ಹಲವು ಘಟನೆಗಳನ್ನು ಆಗಿರುವುದನ್ನು ನೋಡಿದ್ದೇವೆ. ಈ ಹಿನ್ನೆಲೆಯಲ್ಲಿ ರಾಮ ಮಂದಿರ ಉದ್ಘಾಟನೆ ವೇಳೆ ಇಂತಹ ಘಟನೆ ಆಗಬಾರದು ಎಂದು ಹೇಳಿದ್ದಾರೆ. ಈ ಹಿಂದೆ ಚುನಾವಣೆ ವೇಳೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಪರೇಶ ಮೇಸ್ತಾ ಪ್ರಕರಣದಲ್ಲಿ ಬೆಂಕಿ ಹಚ್ಚಿದ್ದನ್ನು ನೋಡಿದ್ದೇವೆ. ಆದರೆ ಸಿಬಿಐ ಕೂಡ ಈ ಪ್ರಕರಣದಲ್ಲಿ ಸಹಜ ಸಾವು ಎಂದು ವರದಿ ನೀಡಿದೆ ಎಂದು ಶಾಸಕ ಭೀಮಣ್ಣ ತಿಳಿಸಿದರು. 

ಇದನ್ನೂ ಓದಿ : ಸಿದ್ದರಾಮಯ್ಯ, ಆಂಜನೇಯ ಮನೆಗೂ ಅಯೋಧ್ಯೆಯ ಮಂತ್ರಾಕ್ಷತೆ ಬರುತ್ತೆ: ಸಿ ಟಿ ರವಿ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.