ನಿಯಂತ್ರಣ ತಪ್ಪಿದ ಕಾರಿಂದ ಬೈಕ್, ಬಸ್ ನಿಲ್ದಾಣಕ್ಕೆ ಡಿಕ್ಕಿ; ದ್ವಿಚಕ್ರವಾಹನ ಸವಾರ ಪವಾಡಸದೃಶ್ಯ ಪಾರು

By

Published : Jun 20, 2023, 6:01 PM IST

Updated : Jun 20, 2023, 7:58 PM IST

thumbnail

ಉಳ್ಳಾಲ (ದಕ್ಷಿಣ ಕನ್ನಡ) : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬೈಕ್ ಹಾಗು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ‌ ಕ್ರಾಸ್​ನಲ್ಲಿ ಜೂನ್​ 19 ರಂದು ಸೋಮವಾರ ಮಧ್ಯಾಹ್ನ‌ ನಡೆದಿದೆ. ತೌಡುಗೋಳಿ‌ ಕ್ರಾಸ್​ನ ಜಂಕ್ಷನ್​ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ಚಾಲಕನು ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ಸಂದರ್ಭದಲ್ಲಿ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್​ಗೆ ಡಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದೆ. 

ಈ ಅಪಘಾತದ ಪರಿಣಾಮ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಂಗುದಾಣದ ಮುಂಭಾಗದ ಕಿರುಗೋಡೆ ನೆಲಕ್ಕುರುಳಿದೆ. ಅದೇ ಸಮಯದಲ್ಲಿ ಪ್ರಯಾಣಿಕರ ತಂಗುದಾಣದಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಕಾರು ಧಾವಿಸಿ‌ ಬರುತ್ತಿರುವುದನ್ನು ಕಂಡು ಒಂದು ಮೂಲೆಗೆ ಹೋಗಿ ನಿಂತಿದ್ದರಿಂದ ಬಚಾವಾಗಿದ್ದಾರೆ. 

ಕಾರಿನಲ್ಲಿದ್ದವರು ನರಿಂಗಾನ ಗ್ರಾಮದ ಶಾಂತಿಪಳಿಕೆ ನಿವಾಸಿ ಅಶ್ರಫ್ ವಿದೇಶದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗ್ಗೆ ಕಾರಿನಲ್ಲಿ ಮನೆಗೆ ಆಗಮಿಸುತ್ತಿದ್ದರು. ಇನ್ನೇನು 2 ಕಿ.ಮೀ ದೂರ ಸಂಚರಿಸಿದರೆ ಮನೆ ತಲುಪಬೇಕಿತ್ತು. ಸಂಬಂಧಿ ಕಾರು ಚಲಾಯಿಸುತ್ತಿದ್ದು, ಅದೃಷ್ಟವಶಾತ್ ಚಾಲಕ ಹಾಗೂ ಅಶ್ರಫ್ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.      

ಇದನ್ನೂ ಓದಿ : 110 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ರೈಲಿಂದ ಕೆಳಗೆ ಬಿದ್ದ ಯುವಕ : ಮುಂದೇನಾಯ್ತು ನೋಡಿ

Last Updated : Jun 20, 2023, 7:58 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.