ಮೇಲ್ಸೇತುವೆಯಿಂದ ಬಿದ್ದ ಸರ್ಕಾರಿ ಬಸ್, 20 ಜನರಿಗೆ ಗಾಯ.. ವಿಡಿಯೋ

By ETV Bharat Karnataka Team

Published : Sep 15, 2023, 8:11 AM IST

thumbnail

ಗಾಜಿಯಾಬಾದ್​, ಉತ್ತರಪ್ರದೇಶ: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್​ವೊಂದು ಮೇಲ್ಸೇತುವೆ ಮೇಲಿಂದ ಬಿದ್ದಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ ಜಿಲ್ಲೆಯಲ್ಲಿ ಸಂಭವಿಸಿದೆ. ದೆಹಲಿ ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದ ಈ ಘಟನೆಯಲ್ಲಿ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಏನಿದು ಘಟನೆ.. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ಸರ್ಕಾರಿ ಬಸ್ ಹೋಗುತ್ತಿತ್ತು. ಈ ವೇಳೆ ಹವಾ ಹವಾಯಿ ರೆಸ್ಟೋರೆಂಟ್ ಬಳಿ ಬಸ್ ನಿಯಂತ್ರಣ ತಪ್ಪಿದೆ. ಬಳಿಕ ಬಸ್ ನೇರವಾಗಿ ರಸ್ತೆ ಬದಿಯ ಡಿವೈಡರ್​ಗೆ ಡಿಕ್ಕಿ ಹೊಡೆದು ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಎಸಿಪಿ ನರೇಶ್ ಕುಮಾರ್ ತಿಳಿಸಿದ್ದಾರೆ. ಗದ್ದೆಗೆ ಬೀಳುವ ಮುನ್ನ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ ಎಂದು ಗಾಯಾಳು ಮಹಮ್ಮದ್ ಸಾಧಿಕ್ ತಿಳಿಸಿದ್ದಾರೆ. ಬಸ್​ ಚಾಲಕ ನಿದ್ರೆಯಲ್ಲಿ ಇದ್ದಿರುವುದೇ ಘಟನೆಗೆ ಕಾರಣ ಎಂದು ಕೆಲ ಪ್ರಯಾಣಿಕರು ಆರೋಪಿಸಿದ್ದಾರೆ. ಆದರೆ ಈ ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. 

ಓದಿ: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ತಿರುಪತಿಗೆ ತೆರಳಿದ್ದ ಬೆಳಗಾವಿಯ ಐವರು ಸಾವು

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.