thumbnail

By

Published : Feb 4, 2023, 8:42 PM IST

Updated : Feb 6, 2023, 4:07 PM IST

ETV Bharat / Videos

ಹುಬ್ಬಳ್ಳಿ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಮೇಯರ್​ಗೆ ಖಾಲಿ ಕೊಡ ನೀಡಿ ಮನವಿ!

ಹುಬ್ಬಳ್ಳಿ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಹುಬ್ಬಳ್ಳಿ - ಧಾರವಾಡ ವಾರ್ಡ್ ನಂ. 59 ರ ಕಾಂಗ್ರೆಸ್ ಸದಸ್ಯೆ ಸುವರ್ಣ ಕಲ್ಲಕುಂಟ್ಲ ಅವರ ನೇತೃತ್ವದಲ್ಲಿ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಈ ಕುರಿತು ಮಾತನಾಡಿದ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲ, ವಾರ್ಡ್ ನಂ.59ರ ಗಾಂಧಿವಾಡ ಸ್ಲಂ ಪ್ರದೇಶದಲ್ಲಿ ಸುಮಾರು ವರ್ಷಗಳ ಹಿಂದೆ ಅಳವಡಿಸಿದ ಪೈಪ ಲೈನ್ ನಿಂದಾಗಿ ಕಲುಷಿತ ನೀರು ಕುಡಿಯುವ ನೀರಿನೊಂದಿಗೆ ಸೇರ್ಪಡೆಗೊಳ್ಳುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

 ಈ ಸಮಸ್ಯೆಯನ್ನು ಶೀಘ್ರವಾಗಿ ಸರಿಪಡಿಸಬೇಕು.‌ ಇನ್ನೂ ಕೆಲ ಪ್ರದೇಶದಲ್ಲಿ ಕುಡಿಯುವ ನೀರಿನ ಸಂಪರ್ಕ ಸರಿಯಾಗಿ ಇದ್ದರೂ ಕೂಡಾ ಪೈಪ್ ಲೈನ್ ಸೋರಿಕೆಯಿಂದಾಗಿ ನೀರಿನ ಸಾಂದ್ರತೆ ಕಡಿಮೆ ಆಗುತ್ತದೆ ಎಂದರು. ಈ ವೇಳೆ ಮೇಯರ್ ಈರೇಶ ಅಂಚಟಗೇರಿ ಅವರಿಗೆ ಖಾಲಿ‌ ಕೊಡ ನೀಡಿ ಕುಡಿಯುವ ನೀರು ಪೂರೈಸುವಂತೆ ಮನವಿ ಮಾಡಿದರು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ: ಬಾಲಕರಿಬ್ಬರ ಮೇಲೆ ಗಂಭೀರ ದಾಳಿ

Last Updated : Feb 6, 2023, 4:07 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.