'ಕಾಂತಾರ 2 ಕೆಲಸ ಶುರು, ಮಾರ್ಚ್​​​ನಿಂದ ಫೋನ್ ಆಫ್': ಫಾಲ್ಕೆ ಪ್ರಶಸ್ತಿ ಬಗ್ಗೆ ರಿಷಬ್​ ಶೆಟ್ಟಿ ಹೀಗಂದ್ರು!

By

Published : Feb 21, 2023, 5:35 PM IST

Updated : Feb 21, 2023, 6:12 PM IST

thumbnail

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕಾಂತಾರ ಸಿನಿಮಾದ ಅಭಿನಯಕ್ಕಾಗಿ (ಹಿಂದಿ) ರಿಷಬ್​ ಶೆಟ್ಟಿ ಅವರಿಗೆ ದಾದಾ ಸಾಹೇಬ್​ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿ ಲಭಿಸಿದೆ. ಕಾಂತಾರ ಚಿತ್ರದ ಶಿವನ ಪಾತ್ರಕ್ಕೆ ಅತ್ಯಂತ ಭರವಸೆಯ ನಟ ಎಂಬ ಟೈಟಲ್​ ಸಿಕ್ಕಿದೆ. ಸೋಮವಾರ ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್​​ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದಾದಾ ಸಾಹೇಬ್​ ಫಾಲ್ಕೆ ಚಿತ್ರೋತ್ಸವ ಪ್ರಶಸ್ತಿ ಸ್ವೀಕರಿಸಿದ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಇಂದು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಅಭಿಮಾನಿಗಳು ಹೆಮ್ಮೆಯಿಂದ ಸ್ವಾಗತಿಸಿದರು. ರಿಷಬ್​ ಅವರೊಂದಿಗೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದರು. 

ಪ್ರಶಸ್ತಿ ಸ್ವೀಕರಿಸಿದ ಬಗ್ಗೆ ಮಾತನಾಡಿದ ನಟ ರಿಷಬ್​ ಶೆಟ್ಟಿ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಹಿಂದಿ‌ ಸಿನಿಮಾಗೆ (ಕಾಂತಾರ ಡಬ್​) ಕೊಟ್ಟ ಪ್ರಶಸ್ತಿ ಆಗಿದೆ. ಕನ್ನಡ ಸಿನಿಮಾಗೆ ಅಲ್ಲ. ಪ್ರಶಸ್ತಿ ಸಿಕ್ಕಿದ್ದು ಬಹಳ ಖುಷಿ ಕೊಟ್ಟಿದೆ. ಜೊತೆಗೆ ಜವಾಬ್ದಾರಿ ಕೂಡಾ ಹೆಚ್ಚಿಸಿದೆ. ಕನ್ನಡ ಸಿನಿಮಾಗಳಿಗೆ ವಿಶೇಷ ಗೌರವ ಸಿಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ರು. ಇನ್ನು ನಮ್ಮ ಟ್ರೆಡಿಷನ್​​ನಲ್ಲೇ (ಲುಂಗಿ) ಹೋಗಿದ್ದೆ. ಅಲ್ಲಿದ್ದವರೆಲ್ಲಾ ಗುರುತಿಸಿದ್ರು. ಇನ್ಮುಂದೆ ಕಾಂತಾರ 2 ಕೆಲಸ ಶುರು ಮಾಡುತ್ತೇನೆ. ಮಾರ್ಚ್​ನಿಂದ ಫೋನ್ ಆಫ್ ಮಾಡುತ್ತೇನೆ ಎಂದುರು. 

ಇದನ್ನೂ ಓದಿ: ಭರವಸೆಯ ನಟನಾಗಿ ಕಾಂತಾರ ಸ್ಟಾರ್: ಫಾಲ್ಕೆ ಪ್ರಶಸ್ತಿ 2023ರ ಸುಂದರ ಕ್ಷಣಗಳು

Last Updated : Feb 21, 2023, 6:12 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.