ನೆಚ್ಚಿನ ಶಿಕ್ಷಕ ವರ್ಗಾವಣೆ: ಶಾಲೆಗೆ ಬೀಗ ಜಡಿದು ವಿದ್ಯಾರ್ಥಿಗಳ ಪ್ರತಿಭಟನೆ

By

Published : Jul 17, 2023, 4:53 PM IST

thumbnail

ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ನೆಚ್ಚಿನ ಶಿಕ್ಷಕಿಯೋರ್ವರು ವರ್ಗಾವಣೆಗೊಂಡ ಹಿನ್ನೆಲೆ ವಿದ್ಯಾರ್ಥಿಗಳು ಕಣ್ಣೀರಿನ ವಿದಾಯ ಹೇಳಿ ಬೀಳ್ಕೊಡುಗೆ ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಇದಕ್ಕೆ ವಿರುದ್ಧ ಎನ್ನುವಂತಹ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಂಗಳ ಗ್ರಾಮದಲ್ಲಿ ನಡೆದಿದೆ. ಶಾಲಾ ಶಿಕ್ಷಕರೊಬ್ಬರ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿರುವ ಗ್ರಾಮದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಂಗಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿದ್ದ ಎಸ್ ಎನ್ ಅವರಾದಿ ಅವರನ್ನು ಓಬಳಾಪುರಕ್ಕೆ ವರ್ಗಾವಣೆ ಮಾಡಲಾಗಿದೆ. ಕಳೆದ ಎಂಟು ವರ್ಷಗಳಿಂದ ಸಂಗಳದಲ್ಲಿ ಎಸ್ ಎನ್ ಅವರಾದಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈಗ ಏಕಾಏಕಿ ಬೇರೆ ಊರಿಗೆ ವರ್ಗಾವಣೆ ಮಾಡಿದ್ದರಿಂದ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು‌ ಶಾಲಾ ಕೊಠಡಿಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಪೋಷಕರು ಕೂಡ ಸಾಥ್ ನೀಡಿದ್ದಾರೆ.

ಎಸ್.ಎನ್ ಅವರಾದಿ ಗುರುಗಳನ್ನು ಯಾವುದೇ ಕಾರಣಕ್ಕೂ ನಮ್ಮ ಶಾಲೆಯಿಂದ ವರ್ಗಾವಣೆ ಮಾಡಬಾರದು. ವರ್ಗಾವಣೆಗೆ ಶಿಕ್ಷಣ ಇಲಾಖೆ ತಡೆ ನೀಡಬೇಕು. ಇಲ್ಲವಾದರೆ ನಾವು ತರಗತಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಎಸ್.ಡಿ.ಎಂ.ಸಿ ಸದಸ್ಯರು ಮನವಲಿಸಿದರೂ ವಿದ್ಯಾರ್ಥಿಗಳು ಮಾತ್ರ ಜಪ್ಪಯ್ಯ ಅನ್ನದೇ ಪ್ರತಿಭಟನೆ ಮುಂದುವರಿಸಿದರು.

ಇದನ್ನೂ ಓದಿ: Emotional Farewell: ವರ್ಗಾವಣೆಗೊಂಡ ನೆಚ್ಚಿನ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರಿನ ವಿದಾಯ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.