thumbnail

ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ತಾವೂ ಸಂಕಷ್ಟಕ್ಕೆ ಸಿಲುಕಿದ ಯುವಕರು - ವಿಡಿಯೋ

By

Published : Jun 27, 2022, 3:16 PM IST

Updated : Feb 3, 2023, 8:24 PM IST

ರೂರ್ಕಿ (ಉತ್ತರಾಖಂಡ): ಜಿಲ್ಲೆಯ ಮಹಾನಗರ ಪಾಲಿಕೆ ಸೇತುವೆ ಬಳಿ ಯುವಕನೊಬ್ಬ ಗಂಗಾನಹರದ ಕೆನಾಲ್​ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ನೀರಿನ ರಭಸ ಹೆಚ್ಚಾಗಿದೆ. ಈ ವೇಳೆ ಸ್ನಾನ ಮಾಡುತ್ತಿದ್ದ ಯುವಕ ಮುಳುಗಲಾರಂಭಿಸಿದ್ದಾನೆ. ಇದನ್ನು ಗಮನಿಸಿ, ಅಲ್ಲೇ ಸ್ನಾನ ಮಾಡುತ್ತಿದ್ದ ಮೂವರು ಯುವಕರು ಆತನನ್ನು ರಕ್ಷಿಸಿದ್ದಾರೆ. ಆದರೆ ನೀರಿನ ರಭಸ ಹೆಚ್ಚಾದ ಕಾರಣ ಅವರೂ ಸಹ ಅಲ್ಲೇ ಸಿಲುಕಿಕೊಂಡು ಕೆಲಕಾಲ ಪರದಾಡಿದರು. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲರನ್ನು ರಕ್ಷಿಸಿದ್ದಾರೆ. ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಯುವಕನನ್ನು ರಕ್ಷಿಸಿದ ಮೂವರ ಕಾರ್ಯಕ್ಕೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Last Updated : Feb 3, 2023, 8:24 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.