ತುಮಕೂರು: ಕೊಬ್ಬರಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ತಿಪಟೂರು ಬಂದ್ ಯಶಸ್ವಿ..!

By

Published : Dec 14, 2022, 1:34 PM IST

Updated : Feb 3, 2023, 8:35 PM IST

thumbnail
ತುಮಕೂರು: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ತಿಪಟೂರು ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದ ಅಂಗಡಿ ಮುಂಗಟ್ಟುಗಳನ್ನು ಸ್ಥಗಿತಗೊಳಿಸಿದ್ದ ವ್ಯಾಪಾರಸ್ಥರು ಬಂದ್​ಗೆ ಬೆಂಬಲ ಸೂಚಿಸಿದ್ದಾರೆ. ಇನ್ನು ತಿಪಟೂರು ಪಟ್ಟಣದಲ್ಲಿ ನಗರದಲ್ಲಿ ವಾಹನಗಳ ಸಂಚಾರದಲ್ಲಿ ವಿರಳವಾಗಿದೆ. ತಿಪಟೂರು ನಗರದ ಎಪಿಎಂಸಿ ಮಾರುಕಟ್ಟೆ ಪ್ರಮುಖ ಮಾರುಕಟ್ಟೆ ಸ್ಥಳಗಳು ಇರುವ ಅಂಗಡಿ ಮುಂಗಟ್ಟುಗಳನ್ನು ಜನರು ಸ್ವಯಂ ಪ್ರೇರಿತರಾಗಿ ಮುಚ್ಚಿದ್ದಾರೆ.ಕೆಎಸ್ಆರ್​ಟಿಸಿ ಬಸ್​​ಗಳ ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಳಿಲ್ಲದೆ ಪ್ರಯಾಣಿಕರು ಪರದಾಡಿದರು.
Last Updated : Feb 3, 2023, 8:35 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.