ರಜೆ ಅರ್ಜಿ ಸಲ್ಲಿಸಿ ಶಾಲೆಯಿಂದ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್.. ಬಾಲಕ ಸ್ಥಳದಲ್ಲೇ ಸಾವು

By

Published : May 17, 2023, 4:58 PM IST

thumbnail

ಲೂಧಿಯಾನ (ಪಂಜಾಬ್​) : ರಜೆ ಅರ್ಜಿಯನ್ನು ಶಾಲೆಗೆ ಸಲ್ಲಿಸಿ ಹಿಂತಿರುಗಿ ಬರುತ್ತಿದ್ದ 13 ವರ್ಷ ಬಾಲಕನ ಮೇಲೆ ಟಿಪ್ಪರ್​​ ಹರಿದಿದೆ. ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೈಲಾಶ್ ನಗರ ಚೌಕ್‌ದಲ್ಲಿ ನಡೆದಿದೆ. ಮೃತ ಬಾಲಕನ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಮೊದಲು ಹಾರ್ನ್ ಮಾಡಿದೆ. ಇದರಿಂದ ಗಾಬರಿಗೊಂಡು ಕೆಳಗೆ ಬಿದ್ದ ಬಾಲಕನ ಮೇಲೆಯೇ ಆರೋಪಿ ಚಾಲಕ ಟಿಪ್ಪರ್​ಅನ್ನು ಚಾಲನೆ ಮಾಡಿಕೊಂಡು ಹೋಗಿದ್ದಾನೆ. 

ಈ ಘಟನೆ ಸಂಭವಿಸಿದ ತಕ್ಷಣವೇ ಸ್ಥಳೀಯರು ಸ್ಥಳಕ್ಕಾಗಮಿಸಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೇ ಬಾಲಕ ಅಷ್ಟರಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತ ನಡೆದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇನ್ನು, ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಕ್ರಮ ಕೈಗೊಂಡಿದ್ದು, ಸ್ಥಳದಿಂದ ಪರಾರಿಯಾಗಿರುವ ಟಿಪ್ಪರ್ ಚಾಲಕನ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.  

ಇದನ್ನೂ ಓದಿ : ಪ್ರತ್ಯೇಕ ವಂಚನೆ ಪ್ರಕರಣ: ದುಪ್ಪಟ್ಟು ಹಣ ಕೊಡುವುದಾಗಿ 18 ಲಕ್ಷ ರೂ. ಪಂಗನಾಮ  

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.