thumbnail

By

Published : Apr 8, 2023, 6:05 PM IST

ETV Bharat / Videos

ಬಂಡೀಪುರ: ಒಂದೆಡೆ ಹೈ ಸೆಕ್ಯೂರಿಟಿ, ಮತ್ತೊಂದೆಡೆ ಆನೆಗಳ ಜೊತೆ ಪ್ರವಾಸಿಗರ ಸೆಲ್ಫಿ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಸಫಾರಿಗೆ ಕ್ಷಣಗಣನೆ ಆರಂಭವಾಗಿದ್ದು ಪೊಲೀಸರು ಎಲ್ಲೆಡೆ ಹೈ ಅಲರ್ಟ್ ಆಗಿದ್ದಾರೆ. ಈ ನಡುವೆ ಬಂಡೀಪುರದಿಂದ ಊಟಿಗೆ ಹೋಗುವ ರಸ್ತೆಯಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಅದನ್ನು ಕಂಡ ಪ್ರವಾಸಿಗರು ಆನೆಗಳ ಜೊತೆ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಹುಚ್ಚಾಟ ಮೆರೆದಿದ್ದಾರೆ‌. ಬಂಡೀಪುರ ಕಾಡಿನ ಹಾದಿಯಲ್ಲಿ ಕಾರ್​ಗಳನ್ನು ನಿಲ್ಲಿಸಿ ಅದರ ಜೊತೆ ಯುವಕರ ಗುಂಪು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವಿಡಿಯೋ ಮಾಧ್ಯಮದವರ ಕ್ಯಾಮರಾಗೆ ಸೆರೆ ಸಿಕ್ಕಿದೆ. ಕಾಡಿನ ರಸ್ತೆಯಲ್ಲಿ ವಾಹನ ನಿಲ್ಲಿಸುವುದು, ಫೋಟೋ ತೆಗೆದುಕೊಳ್ಳುವುದು ಅಪರಾಧವಾಗಿದೆ.

ಹುಲಿ ಗಣತಿ ವರದಿ ಬಿಡುಗಡೆ: ಭಾನುವಾರ (ಏ.9 ರಂದು) ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಸಫಾರಿ ನಡೆಸಿ, ನಂತರ ಮೈಸೂರಿನ ಕೆಎಸ್​ಒಯು ಭವನದಲ್ಲಿ 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ವರದಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆಯುವ ನಿರೀಕ್ಷೆ ಇದೆ ಎಂಬ ಕಾತರ ಎಲ್ಲರಲ್ಲೂ ಮೂಡಿದೆ. ಈ ಕಾರ್ಯಕ್ರಮ ಬಂಡೀಪುರ ಹುಲಿ ಯೋಜನೆಗೆ 50ರ ಸಂಭ್ರಮವಾಗಿದೆ. 

ಇದನ್ನೂ ಓದಿ: ಭಾರತದ ಹುಲಿ ಸಂರಕ್ಷಣಾ ಯೋಜನೆಗೆ 50ರ ಸಂಭ್ರಮ: ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ಅಗ್ರ ಸ್ಥಾನಕ್ಕೇರುವ ನಿರೀಕ್ಷೆ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.