thumbnail

By ETV Bharat Karnataka Team

Published : Nov 8, 2023, 4:54 PM IST

ETV Bharat / Videos

ಅತಿಭಾರ ಹೊತ್ತ ವಾಹನಗಳ ತಪಾಸಣೆ : ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಟ್ರಾಫಿಕ್​ ಜಾಮ್​

ಚಾಮರಾಜನಗರ: ಅತಿಭಾರ ಹೊತ್ತ ವಾಹನಗಳಿಗೆ ತಮಿಳುನಾಡು ಅರಣ್ಯ ಇಲಾಖೆಯು ದಂಡ ವಿಧಿಸುತ್ತಿದೆ. ಪ್ರತಿ ಲಾರಿ, ಟ್ರಕ್​ಗಳ ತೂಕ ಅಳೆಯುತ್ತಿರುವುದರಿಂದ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್​ ಜಾಮ್​ ಉಂಟಾಗಿದೆ.

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರಲ್ಲಿ ತಮಿಳುನಾಡಿನ ಅರಣ್ಯ ಇಲಾಖೆಯು ಅತಿಭಾರ ಹೊತ್ತ ವಾಹನಗಳಿಗೆ ದಂಡ ವಿಧಿಸುತ್ತಿರುವ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿದ್ದಾರೆ.

ದಿಂಬಂ ಘಟ್ಟ ಪ್ರದೇಶದಲ್ಲಿ ಸರಕು ತುಂಬಿದ ವಾಹನಗಳು 16ಟನ್ ಅಷ್ಟೇ ಹೊತ್ತು ಸಾಗಬೇಕು ಎಂದು ಹೈಕೋರ್ಟ್ ಆದೇಶ ಹಿನ್ನೆಲೆ ಗಡಿಯಲ್ಲಿ ಸರಕುಗಳ ತೂಕ ಪರೀಕ್ಷಿಸಿ ಅನುಮತಿ ನೀಡಲಾಗುತ್ತಿದೆ. ಈ ಹಿನ್ನೆಲೆ ವಾಹಗಳ ದಟ್ಟಣೆ ಉಂಟಾಗಿದೆ. 6 ಮತ್ತು 10 ಚಕ್ರದ ಲಾರಿಗಳು, ಟ್ರಕ್​ಗಳು ಕೇವಲ 16.2 ಟನ್ ನಷ್ಟು ಮಾತ್ರ ಸರಕು ತುಂಬಿ ಸಾಗಣೆ ನಡೆಸಬಹುದಾಗಿದೆ. ಆದರೆ, ಬಹುತೇಕ ಲಾರಿಗಳು 20-25 ಟನ್ ನಷ್ಟು ತೂಕ ಹೊತ್ತು ಸಾಗುತ್ತಿದ್ದುದು ಕಂಡುಬಂದಿದ್ದರಿಂದ ಅರಣ್ಯ ಇಲಾಖೆ ಈ ಕ್ರಮ ತೆಗೆದುಕೊಂಡಿದೆ. ಇದರಿಂದ ಆಂಬ್ಯುಲೆನ್ಸ್​ ಸೇರಿದಂತೆ ಹಲವು ವಾಹನಗಳು ಟ್ರಾಫಿಕ್​ನಲ್ಲಿ ಸಿಲುಕಿ ಪರದಾಡುವಂತಾಗಿದೆ. 

ಇದನ್ನೂ ಓದಿ: ತುಂಗಭದ್ರಾ ನದಿಗೆ ಉರುಳಿ ಬಿದ್ದ ಲಾರಿ, ಚಾಲಕ ಸಾವು

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.