thumbnail

By

Published : Mar 18, 2022, 11:47 AM IST

Updated : Feb 3, 2023, 8:20 PM IST

ETV Bharat / Videos

ರಂಗೋಲಿಯಲ್ಲಿ ಅರಳಿದ ಅಪ್ಪು.. ಅಭಿಮಾನಿಗಳ ಎದೆಯಲ್ಲಿ ರಾಜ್‌ಕುವರ ಅಜರಾಮರ..

ಶಿವಮೊಗ್ಗ: ಕನ್ನಡ ಚಿತ್ರರಂಗದ ಯುವರತ್ನ ಪುನೀತ್​ ರಾಜ್​ಕುಮಾರ್​ ನಮ್ಮನ್ನೆಲ ಅಗಲಿ ದಿನಗಳು ಉರುಳಿದರೂ ಅವರ ನೆನಪು ಅಭಿಮಾನಗಳ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ನಿನ್ನೆ ಅವರ ಹುಟ್ಟುಹಬ್ಬದ ಸಲುವಾಗಿ ಜೇಮ್ಸ್ ಚಿತ್ರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತ ಅಭಿಮಾನಿಗಳು ಪುನೀತ್​ ರಾಜ್​ಕುಮಾರ್​ ಭಾವಚಿತ್ರವನ್ನು ತಮ್ಮ ಎದೆ ಮೇಲೆ ಹಚ್ಚೆ ಹಾಕಿಸಿಕೊಳ್ಳುವ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ. ಕಲಾವಿದ ಹರೀಶ್ ಕುಮಾರ್ ಅವರು ನಗರದ ಸಿಟಿ ಸೆಂಟರ್ ಮಾಲ್​​ನ 2ನೇ ಮಹಡಿಯಲ್ಲಿರುವ ಭಾರತ್ ಸಿನಿಮಾ ಹಾಲ್​ನ ಎದುರು ಪುನೀತ್ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿದ್ದರು. ಈ ಮೂಲಕ ಪುನೀತ್ ಅವರ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಲಾಗಿದೆ.
Last Updated : Feb 3, 2023, 8:20 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.