ಫೇಲಾದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ನಿರ್ದೇಶಕ ಚೇತನ್, ಸೋನು ಪಾಟೀಲ್
ಇಂದು ಎಸ್ಎಸ್ಎಲ್ಸಿ ಫಲಿತಾಂಶ ಹೊರಬಿದ್ದಿದ್ದು, ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳು ಸಂತೋಷವನ್ನು ಸೆಲಬ್ರೇಟ್ ಮಾಡಿದರೆ ಕಡಿಮೆ ಅಂಕ ಗಳಿಸಿದ ಹಾಗೂ ಫೇಲ್ ಆದ ವಿದ್ಯಾರ್ಥಿಗಳು ದುಃಖ ಪಡುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಫಲಿತಾಂಶವನ್ನು ಮನಸ್ಸಿಗೆ ತೆಗೆದುಕೊಳ್ಳದೆ ಸಪ್ಲಿಮೆಂಟರಿಯಲ್ಲಿ ಮತ್ತೆ ಪರೀಕ್ಷೆ ಕಟ್ಟಿ ಪಾಸ್ ಮಾಡಿ, ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ ಎಂದು ಬಿಗ್ಬಾಸ್ ಖ್ಯಾತಿಯ ನಟಿ ಸೋನು ಪಾಟೀಲ್ ಹಾಗೂ ಭರ್ಜರಿ ಚಿತ್ರದ ನಿರ್ದೇಶಕ ಚೇತನ್ ಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದ್ದಾರೆ.