thumbnail

By

Published : Nov 6, 2020, 12:56 PM IST

ETV Bharat / Videos

ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್​ನಲ್ಲಿ ಟೂತ್​​​​ಪೇಸ್ಟ್ ತುಂಬಿದ್ದ ಲಾರಿ ಪಲ್ಟಿ

ಹುಬ್ಬಳ್ಳಿ: ಹರಿಯಾಣದಿಂದ ಹುಬ್ಬಳ್ಳಿಯ ತಾರಿಹಾಳ ಇಂಡಸ್ಟ್ರೀಯಲ್ ಪ್ರದೇಶದತ್ತ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಟೂತ್​ಪೇಸ್ಟ್​​​ ಅನ್ನು ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಸಾಹುಲ್ ಖಾನ್​​​ ಹಾಗೂ ಕ್ಲೀನರ್ ಮೊಹ್ಮದ ಸಯೀಫ್​​​ ತಕ್ಷಣವೇ ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಲಾರಿ ಪಲ್ಟಿಯಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಲಾರಿಯನ್ನು ಮೇಲೆತ್ತಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.