ಅದೃಷ್ಟ ಚೆನ್ನಾಗಿತ್ತು ಅನ್ಸುತ್ತೆ... ಲಾರಿ ಮಗುಚಿದರೂ ಪಾರಾದ ಚಾಲಕ
ಶಿವಮೊಗ್ಗ: ಶಿಕಾರಿಪುರದಿಂದ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಕುಂಚೇನಹಳ್ಳಿಯಲ್ಲಿ ನಿರ್ಮಿಸಿರುವ ರೋಡ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಪಲ್ಟಿಯಾಗಿದ್ದು, ಪವಾಡ ಸದೃಶ ರೀತಿಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.