ಟಿ. ನರಸೀಪುರದಲ್ಲಿ ಶೂಟಿಂಗ್​​ನಲ್ಲಿರುವ ಜಗ್ಗೇಶ್​​: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಣೆ - refusal to respond to media

🎬 Watch Now: Feature Video

thumbnail

By

Published : Feb 23, 2021, 5:14 PM IST

ಮೈಸೂರು: ಶೂಟಿಂಗ್​ನಲ್ಲಿ ಭಾಗವಹಿಸಿರುವ ನಟ ಜಗ್ಗೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಿನ್ನೆ ಸಿನಿಮಾ ಶೂಟಿಂಗ್ ಸ್ಥಳಕ್ಕೆ ದರ್ಶನ್ ಅಭಿಮಾನಿಗಳು ಆಗಮಿಸಿ, ಜಗ್ಗೇಶ್​​ ಅವರೊಂದಿಗೆ ಗಲಾಟೆ ನಡೆಸಿದ್ದರು. ಆ ನಂತರ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ಹೋಗಿದ್ದ ಜಗ್ಗೇಶ್ ಇಂದು ಟಿ. ನರಸೀಪುರ ತಾಲೂಕಿನ ರಂಗಸಮುದ್ರ ಬಳಿ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಿನ್ನೆಯ ಘಟನೆಯಿಂದ ಇಂದು ಶೂಟಿಂಗ್ ನಡೆಯುವ ಸ್ಥಳದಲ್ಲಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಶೂಟಿಂಗ್ ಸ್ಥಳಕ್ಕೆ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.