ವಿಕ್ಟೋರಿಯಾ ಆಸ್ಪತ್ರೆಗೆ ಅಲೋಕ್ ಕುಮಾರ್ ಭೇಟಿ: ಸಿಬ್ಬಂದಿ ಆರೋಗ್ಯ ವಿಚಾರಣೆ - ರಾಜ್ಯ ಪೊಲೀಸ್ ಮೀಸಲು ಪಡೆಯ ಎಡಿಜಿಪಿ ಅಲೋಕ್ ಕುಮಾರ್
🎬 Watch Now: Feature Video
ಬೆಂಗಳೂರು: ಕೊರೊನಾ ನಿಯಂತ್ರಿತ ಪ್ರದೇಶಗಳಲ್ಲಿ ಹಾಗೂ ಕ್ವಾರಂಟೈನ್ ಕೇಂದ್ರಗಳ ಮುಂದೆ ಆತಂಕದ ನಡುವೆಯೂ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನ ರಾಜ್ಯ ಪೊಲೀಸ್ ಮೀಸಲು ಪಡೆಯ (ಕೆಎಸ್ಆರ್ಪಿ) ಎಡಿಜಿಪಿ ಅಲೋಕ್ ಕುಮಾರ್ ಭೇಟಿಯಾಗಿ ಆತ್ಮವಿಶ್ವಾಸ ತುಂಬಿದ್ದಾರೆ. ಕೊರೊನಾ ಆಸ್ಪತ್ರೆಯಾಗಿ ಪರಿವರ್ತನೆಯಾಗಿರುವ ವಿಕ್ಟೊರಿಯಾ ಆಸ್ಪತ್ರೆ ಮುಂದೆ ಕೆಲಸ ಮಾಡುತ್ತಿರುವ ಕೆಎಸ್ಆರ್ಪಿ ಸಿಬ್ಬಂದಿಯನ್ನ ಭೇಟಿ ಮಾಡಿ ಅಹವಾಲು ಆಲಿಸಿದರು. ಬಳಿಕ ಸಂದಿಗ್ಧ ಪರಿಸ್ಥಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು. ಇಲ್ಲಿನ ಪ್ರತಿಯೊಬ್ಬ ಸಿಬ್ಬಂದಿ ಅತ್ಯಂತ ಜಾಗರೂಕತೆಯಿಂದ ಕೆಲಸ ಮಾಡಬೇಕು. ಗರಿಷ್ಠ ಸುರಕ್ಷಿತ ಕ್ರಮಗಳೊಂದಿಗೆ ಕೆಲಸ ಮಾಡಿ. ಆದಷ್ಟು ಬಿಸಿ ನೀರು, ಕಷಾಯ ಕುಡಿಯಿರಿ. ಯೋಗ, ಪ್ರಾಣಾಯಾಮ ಮಾಡಿದರೆ ಯಾವುದೇ ವೈರಾಣು ಹತ್ತಿರ ಸುಳಿಯುವುದಿಲ್ಲ ಎಂದು ಸಲಹೆ ನೀಡಿದರು. ಬಳಿಕ ಶಿವಾಜಿನಗರ ಹಾಗೂ ಜೆ.ಜೆ.ನಗರಕ್ಕೂ ಭೇಟಿಯಾಗಿ ಅಲ್ಲಿನ ಸಿಬ್ಬಂದಿಗೂ ಆತ್ಮಸ್ಥೆರ್ಯ ತುಂಬಿದರು.