ದೇಶಾದ್ಯಂತ ಬ್ಯಾಂಕ್​ ಬಂದ್​: ಉಡುಪಿಯಲ್ಲಿ ಬ್ಯಾಂಕಿಂಗ್ ವಹಿವಾಟು ಸ್ಥಬ್ಧ

By

Published : Jan 31, 2020, 6:01 PM IST

thumbnail
ದೇಶದಾದ್ಯಂತ ವೇತನ ಪರಿಷ್ಕರಣೆ, ಸಮಾನ ಪಿಂಚಣಿ ಸಹಿತ 12 ಬೇಡಿಕೆಗಳನ್ನು ಮುಂದಿಟ್ಟು ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬ್ಯಾಂಕಿಂಗ್ ವಹಿವಾಟು ಬಹುತೇಕ ಸ್ಥಬ್ಧಗೊಂಡಿದೆ. ಬ್ಯಾಂಕ್ ಯೂನಿಯನ್​ಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಧರಣಿ ಮಾಡಿದ ನೌಕರರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ನೂರಾರು ಬ್ಯಾಂಕ್ ಉದ್ಯೋಗಿಗಳು ಪ್ರತಿಭಟನೆಯಲ್ಲಿ ಭಾಗಿಯಾದ್ದರಿಂದ ಬಹುತೇಕ ರಾಷ್ಟ್ರೀಕೃತ ಬ್ಯಾಂಕ್​​ಗಳು ಇವತ್ತು ಬಾಗಿಲು ಹಾಕಿವೆ. ಆದರೆ ನಗರದ ಎಲ್ಲ ಖಾಸಗಿ ಬ್ಯಾಂಕುಗಳು ಓಪನ್ ಆಗಿದ್ದು ಗ್ರಾಹಕರಿಗೆ ಎಂದಿನಂತೆ ಸೇವೆ ನೀಡುತ್ತಿವೆ. ರಾಷ್ಟ್ರೀಕೃತ ಬ್ಯಾಂಕುಗಳು ಇಂದಿನಿಂದ ಮೂರು ದಿನಗಳ ಕಾಲ ಬಂದ್​ ನಡೆಸುವುದರಿಂದ ವಾರಾಂತ್ಯದಲ್ಲಿ ಗ್ರಾಹಕರಿಗೆ ಬಂದ್ ಬಿಸಿ ತಟ್ಟುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲ ಎಟಿಎಂಗಳಲ್ಲಿ ನಗದು ತುಂಬಲಾಗಿದ್ದು ಗ್ರಾಹಕರು ತುಸು ನಿಟ್ಟುಸಿರು ಬಿಡುವಂತಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.