ಬಸವಕಲ್ಯಾಣ ಉಪಚುನಾವಣೆ: ಉತ್ಸಾಹದಿಂದ ಮತಗಟ್ಟೆಗಳತ್ತ ಆಗಮಿಸುತ್ತಿರುವ ಮತದಾರರು
ಬೀದರ್: ಬಸವಕಲ್ಯಾಣ ಉಪಚುನಾವಣೆಯ ಮತದಾನ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಬಸವಕಲ್ಯಾಣ ಜೆಡಿಎಸ್ ಅಭ್ಯರ್ಥಿ ಸೈಯದ್ ಖಾದ್ರಿ, ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ, ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಹಾಗೂ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಸೇರಿದಂತೆ ಒಟ್ಟು 12 ಅಭ್ಯರ್ಥಿಗಳು ಈಗಾಗಲೇ ಮತದಾನ ಮಾಡಿದ್ದಾರೆ. ಒಟ್ಟು 326 ಮತಗಟ್ಟೆಗಳಲ್ಲಿ 2,39,782 ಮತದಾರರು ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಎರಡು ಸಖಿ ಮತಗಟ್ಟೆಗಳು ಹಾಗೂ 172 ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ.