ಬೆಳಗಾವಿ ಪತ್ರಕರ್ತರ ಸಂಘದಿಂದ ’ಪಾಪು’ಗೆ ಶ್ರದ್ಧಾಂಜಲಿ
ಬೆಳಗಾವಿ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಭಾಭವನದಲ್ಲಿ ಇಂದು ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಪಾಪು ಅವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಬೆಳಗಾವಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮಹೇಶ ವಿಜಾಪುರ, ನಾಡೋಜ ಡಾ. ಪಾಟೀಲ ಪುಟ್ಟಪ್ಪನವರು ಕನ್ನಡ ನಾಡು-ನುಡಿಯ ರಕ್ಷಣೆಯಲ್ಲಿ ಕೈಗೊಂಡ ಸೇವೆ ಸ್ಮರಣೀಯವಾದುದು ಎಂದು ನೆನಪು ಮಾಡಿಕೊಂಡರು.