ಗದಗ ಪಾಲಿಕೆಯಿಂದ ಸ್ಯಾನಿಟೈಸರ್ ಸಿಂಪಡಣೆ: ಕೊರೊನಾ ಹೊಡೆದೋಡಿಸಲು ಕ್ರಮ
ಬಳ್ಳಾರಿ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಗಣಿ ನಗರಿ ಬಳ್ಳಾರಿಯ ಪ್ರಮುಖ ರಸ್ತೆಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು. ಬಳ್ಳಾರಿ ಮಹಾನಗರ ಪಾಲಿಕೆಯು ಜಿಲ್ಲೆಯ ಗಡಿಗಿ ಚನ್ನಪ್ಪ ವೃತ್ತ, ರೈಲು ನಿಲ್ದಾಣ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಟ್ಯಾಂಕರ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಲಾಯಿತು. ಬಳ್ಳಾರಿ ಲಾಕ್ ಡೌನ್ ಹಿನ್ನಲೆ ಇಂದು ಕೂಡ ಸಾರ್ವಜನಿಕ ಸಂಚಾರ ಸ್ಥಗಿತ ಮುಂದುವರಿಯಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ ನೇತೃತ್ವದಲ್ಲಿ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಪೊಲೀಸರ ಸರ್ಪಗಾವಲು ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳೆಲ್ಲಾ ಖಾಲಿ, ಖಾಲಿಯಾಗಿದ್ದವು.